SHIVAMOGGA LIVE NEWS, 17 JANUARY 2025
ಹೊಳೆಹೊನ್ನೂರು : ಮೂವರು ಅಡಿಕೆ (Adike) ಕಳ್ಳರನ್ನು ಪೊಲೀಸರು ಬಂಧಿಸಿದ್ದು, 6 ಕ್ವಿಂಟಾಲ್ ಅಡಕೆ, ಮೂರು ಬೈಕ್ ಹಾಗೂ ಒಂದು ಮಾರು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿಯ ಸಾಜಿದ್(25), ಕೂಡ್ಲಿಯ ಜಮೀರ್ ಶೇಖ್(24) ಮತ್ತು ಚನ್ನಗಿರಿಯ ಮಹಮ್ಮದ್ ಮಹೀಬುಲ್ಲಾ(23) ಬಂಧಿತರು. ಶ್ರೀನಿವಾಸಪುರದ ರಮೇಶ ಎಂಬುವವರ ಮನೆಯಲ್ಲಿದ್ದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಪಿಎಸ್ಐ ರಮೇಶ್, ಸಿಬ್ಬಂದಿ ಮಂಜುನಾಥ, ಕೃಷ್ಣನಾಯ್ಕ, ಅಣ್ಣಪ್ಪ, ಪ್ರಕಾಶ್ ನಾಯ್ಕ, ಮಂಜುನಾಥ, ಪ್ರಸನ್ನ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು