ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 9 NOVEMBER 2024 Advocate
ಹಬ್ಬದ ರಜೆ ಅವಧಿಯಲ್ಲಿ ಶಾಲೆಯಲ್ಲಿ ಕಳ್ಳತನ
ಶಿವಮೊಗ್ಗ : ಶಾಲೆಗೆ ದೀಪಾವಳಿ ಹಬ್ಬದ ರಜೆ ಇದ್ದಾಗ ಕಿಟಕಿಯ ಸರಳು ಮುರಿದು ಪಾತ್ರೆಗಳನ್ನು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆ ಪಕ್ಕದಲ್ಲಿರುವ ಸರ್ಕಾರಿ ತಮಿಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃತ್ಯ ನಡೆದಿದೆ. ಹಬ್ಬದ ರಜೆ ಮುಗಿಸಿ ಶಾಲೆಯ ಸಿಬ್ಬಂದಿ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 6 ಸಾವಿರ ರೂ. ಮೌಲ್ಯದ ಪಾತ್ರೆಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಹರು ಸ್ಟೇಡಿಯಂನಲ್ಲಿ ವಕೀಲರೊಬ್ಬರ ಬೈಕ್ ಕಳವು
ಶಿವಮೊಗ್ಗ : ನೆಹರು ಸ್ಟೇಡಿಯಂ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ. ವಕೀಲ ಸಂತೋಷ್ ಕುಮಾರ್ ಅವರು ಸ್ಟೇಡಿಯಂ ಒಳಗೆ ಹೋಂಡಾ ಆಕ್ಟೀವಾ ನಿಲ್ಲಸಿ ಕಚೇರಿಗೆ ಹೋಗಿದ್ದರು. ಕೋರ್ಟ್ಗೆ ತೆರಳುವುದಕ್ಕಾಗಿ ವಾಹನ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಂತೋಷ್ ಕುಮಾರ್ ಬಳಿಕ ಈ-ಎಫ್ಐಆರ್ ದಾಖಲಿಸಿದ್ದರು. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್, ಲಗೇಜ್ ಆಟೋ ಡಿಕ್ಕಿ, ಇಬ್ಬರಿಗೆ ಗಾಯ
ಶಿವಮೊಗ್ಗ : ಲಗೇಜ್ ಆಟೊ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಬಿಕ್ಕೊನಹಳ್ಳಿ ಗ್ರಾಮದ ಸಮೀಪ ಘಟನೆ ನಡೆದಿದೆ. ಮಂಡಘಟ್ಟದ ಕಿರಣ್ ಮತ್ತು ಮೌನೇಶ್ ಎಂಬುವವರು ಬೈಕ್ನಲ್ಲಿ ಸವಳಂಗಕ್ಕೆ ತೆರಳುತ್ತಿದ್ದರು. ಎದುರಿನಿಂದ ಬಂದ ಲಗೇಜ್ ಆಟೋ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಬೈಕ್ ಸವಾರರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಲಗೇಜ್ ಆಟೋ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ನಿಧನ, ಗಣ್ಯರಿಂದ ಸಂತಾಪ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















