ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

ಶಿವಮೊಗ್ಗ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯುವತಿಗೆ (rescue a girl) ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗದ ಅಕ್ಕ ಪಡೆಯ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸೋಮವಾರ ಅಕ್ಕ ಪಡೆಯ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭ ಯುವತಿಯೊಬ್ಬಳು ಅಳುತ್ತಾ ನಿಂತಿದ್ದರು. ಕೂಡಲೇ ಸಿಬ್ಬಂದಿ ಆಕೆಯನ್ನು ವಿಚಾರಿಸಿದಾಗ, ವ್ಯಕ್ತಿಯೊಬ್ಬನು ತನಗೆ ಉಪಟಳ ನೀಡುತ್ತಿರುವ ಬಗ್ಗೆ ಆಕೆ ಮಾಹಿತಿ ನೀಡಿದ್ದರು.

Akka-Pade-in-Shimoga-nabs-a-person-for-teasing-a-girl

Akka-Pade-in-Shimoga-nabs-a-person-for-teasing-a-girl

ಕಾರ್ಯಪ್ರವೃತ್ತರಾದ ಅಕ್ಕ ಪಡೆ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಅಲ್ಲಿ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿ, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment