SHIVAMOGGA LIVE NEWS | 1 NOVEMBER 2022
SHIMOGA |ಸರ್ಕಾರಿ ವಾಹನದಲ್ಲಿ ಬಂದ ನಕಲಿ ಅಧಿಕಾರಿ (FAKE OFFICER), ಅಂಗಡಿ ಮಾಲೀಕರೊಬ್ಬರಿಗೆ ದಂಡ ಹಾಕುವ ಬೆದರಿಕೆ ಒಡ್ಡಿದ್ದಾನೆ. ಇದರಿಂದ ವಿನಾಯಿತಿ ಬೇಕಿದ್ದರೆ ತನಗೆ ಹಣ ನೀಡಬೇಕು ಎಂದು ಸೂಚನೆ ಕೊಟ್ಟಿದ್ದಾನೆ. ಈತನ ಅಸಲಿ ಬಣ್ಣ ಬಯಲಾಗುತ್ತಿದ್ದಂತೆ ಅಂಗಡಿ ಮಾಲೀಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವಿನೋಬನಗರದ ಎಪಿಎಂಸಿ ಬಳಿ 100 ಅಡಿ ರಸ್ತೆಯಲ್ಲಿರುವ ಗೊರೂರು ಮಾರ್ಟ್ ನಲ್ಲಿ ಘಟನೆ ಸಂಭವಿಸಿದೆ. ಮಾಲೀಕ ಕುಮಾರ್ ಅವರಿಂದ ಹಣ ವಸೂಲಿಗೆ ಯತ್ನಿಸಿದ ನಕಲಿ ಫುಡ್ ಇನ್ಸ್ ಪೆಕ್ಟರ್ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
(FAKE OFFICER)
ಅಸಲಿ ಜೀಪಲ್ಲಿ ಬಂದ ನಕಲಿ ಅಧಿಕಾರಿ
ಭಾನುವಾರ ಸಂಜೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಬೋರ್ಡ್ ಇರುವ ಜೀಪಿನಲ್ಲಿ ಬಂದ ವ್ಯಕ್ತಿಯೊಬ್ಬ, ಗೊರೂರು ಮಾರ್ಟ್ ಒಳಗೆ ಬಂದು ತನ್ನನ್ನು ಫುಡ್ ಇನ್ಸ್ ಪೆಕ್ಟರ್ ಗಂಗಾಧರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂಗಡಿಯೊಳಗೆ ಪರಿಶೀಲನೆ ನಡೆಸಿದ್ದಾನೆ. ಕೆಲವು ವಸ್ತುಗಳ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಇದನ್ನು ಮಾರಾಟ ಮಾಡುವಂತಿಲ್ಲ ಎಂದು ತಕರಾರು ತೆಗೆದಿದ್ದಾನೆ. ಅಲ್ಲದೆ ಜೀಪಿನಲ್ಲಿದ್ದ ವ್ಯಕ್ತಿಗೆ ರಶೀದಿ ಪುಸ್ತಕ ತರಲು ಸೂಚಿಸಿದ್ದಾನೆ.
(FAKE OFFICER)
ವ್ಯವಹಾರ ಆರಂಭಿಸಿದ ಇನ್ಸ್ ಪೆಕ್ಟರ್
ರಶೀದಿ ಪುಸ್ತಕ ಕೈಯಲ್ಲಿ ಹಿಡಿದು 25 ಸಾವಿರ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಗೊರೂರು ಮಾರ್ಟ್ ಮಾಲೀಕ ಕುಮಾರ್ ಅವರಿಗೆ ಬೆದರಿಕೆ ಒಡ್ಡಿದ್ದಾನೆ. ದಂಡದಿಂದ ವಿನಾಯಿತಿ ನೀಡಬೇಕಿದ್ದರೆ ತನಗೆ ಹಣ ಕೊಡಬೇಕು ಎಂದು ಸೂಚಿಸಿದ್ದಾನೆ. ಮೊದಲಿಗೆ 2 ಸಾವಿರ ರೂ. ಹಣ ಪಡೆದಿದ್ದಾನೆ. ಇನ್ನೂ 10 ರಿಂದ 12 ಸಾವಿರ ರೂ. ಖರ್ಚಾಗಲಿದೆ. ಅಂಗಡಿಯ ದಾಖಲೆಗಳನ್ನು ಪರಿಶೀಲಿಸಬೇಕಿರುವುದರಿಂದ ಮರುದಿನ ಬರುವುದಾಗಿ ತಿಳಿಸಿ ಜೀಪಿನಲ್ಲಿ ತೆರಳಿದ್ದಾನೆ.
ಓಡಿ ಹೋದ ‘ಫುಡ್ ಇನ್ಸ್ ಪೆಕ್ಟರ್’
ಸೋಮವಾರ ಸಂಜೆ ಗೊರೂರು ಮಾರ್ಟ್ ಹೊರಗೆ ಜನ ಜಮಾಯಿಸಿದ್ದರು. ಒಳಗೆ ಕೆಲಸ ಮಾಡುತ್ತಿದ್ದ ಮಾಲೀಕ ಕುಮಾರ್ ಅವರು, ದಿಢೀರ್ ಜನ ಸೇರಿದ್ದನ್ನು ಗಮನಿಸಿ ಹೊರಗೆ ಬಂದಿದ್ದಾರೆ. ಫುಡ್ ಸೇಫ್ಟಿ ಇನ್ಸ್ ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದ ಗಂಗಾಧರ್ ಗಂಗಾಧರ್ ಎಂಬಾತನನ್ನು ಜನರು ಹಿಡಿದುಕೊಳ್ಳಲು ಯತ್ನಿಸುತ್ತಿದ್ದರು. ಆಗ ಅತ ಸ್ಥಳದಿಂದ ಓಡಿ ಹೋಗಿದ್ದಾನೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಸಹ್ಯಾದ್ರಿ ಕಾಲೇಜು ಕಾಂಪೌಂಡ್ ಧ್ವಂಸ, ಗಂಧದ ಮರಗಳು ಕಟ್
ಫುಡ್ ಸೇಫ್ಟಿ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡು, ತಮ್ಮ ಅಂಗಡಿಗೆ ಬಂದು ದಂಡ ಹಾಕುವುದಾಗಿ ಬೆದರಿಕೆ ಒಡ್ಡಿ, ಹಣ ಪಡೆದ ಆರೋಪಿ ವಿರುದ್ಧ, ಮಾಲೀಕ ಕುಮಾರ್ ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.