ಮೊಬೈಲ್‌ಗಾಗಿ ಕೈ ಕೈ ಮಿಲಾಯಿಸಿದ ಇಬ್ಬರು ಯುವಕರು, ದೂರು, ಪ್ರತಿದೂರು ದಾಖಲು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಭದ್ರಾವತಿ : ಮೊಬೈಲ್‌ (Mobile) ವಿಚಾರವಾಗಿ ಇಬ್ಬರು ಯುವಕರು ಕೈ ಕೈ ಮಿಲಾಯಿಸಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ಘಟನೆ ಸಂಭವಿಸಿದ್ದು, ದೂರು, ಪ್ರತಿದೂರು ದಾಖಲಾಗಿದೆ. ಚೇತನ್‌ ಮತ್ತು ರೋಷನ್‌ ಎಂಬುವವರು ಹೊಡೆದಾಡಿಕೊಂಡಿದ್ದಾರೆ.

ಅಷ್ಟಕ್ಕು ಆಗಿದ್ದೇನು?

ರೋಷನ್‌ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಪರಿಚಿತರೊಬ್ಬರಿಗೆ ಕರೆ ಮಾಡಬೇಕಿದ್ದರಿಂದ ಅಲ್ಲಿಯೇ ಇದ್ದ ಚೇತನ್‌ ಮೊಬೈಲ್‌ ಕೇಳಿದ್ದಾರೆ. ಆಗ ಇಬ್ಬರ ಮಧ್ಯೆ ಗಲಾಟೆಯಾಗಿದೆ.

ದೂರು, ಪ್ರತಿದೂರು ದಾಖಲು

ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು ಕರೆ ಮಾಡಿ ಕೊಡುತ್ತೇನೆ ಎಂದು ಚೇತನ್‌ಗೆ ಕೇಳಿದಾಗ ಆತ ನಿಂದಿಸಿದ್ದಾನೆ, ಬಿಕಾರಿಗಳಿಗೆ ಫೋನ್‌ ಕುಡುವುದಿಲ್ಲ ಎಂದು ಟೀಕಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಲಾಗಿದೆ ಎಂದು ರೋಷನ್‌ ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ » ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

ಇತ್ತ, ಚೇತನ್‌ ನೀಡಿರುವ ದೂರಿನಲ್ಲಿ, ರೋಷನ್‌ ತನ್ನನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿ ಫೋನ್‌ ಕೊಡುವಂತೆ ಆಗ್ರಹಿಸಿದ್ದ. ಅಲ್ಲದೆ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment