ಗಣಪತಿ ಮೆರವಣಿಗೆಯಲ್ಲಿ ಡೊಳ್ಳಿನ ವಿಚಾರಕ್ಕೆ ಗಲಾಟೆ, ಪೊಲೀಸ್‌ ಸೇರಿ ಹಲವರಿಗೆ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

HOLEHONNURU, 8 SEPTEMBER 2024 : ಗಣಪತಿ ವಿಸರ್ಜನ ಪೂರ್ವ ಮೆರವಣಿಗೆ (Procession) ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿದ ಹಲವರು ಗಾಯಗೊಂಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ವಿಷಯ ತಿಳಿದು ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ಘಟನೆಗೆ ಕಾರಣವೇನು?

ಅರಬಿಳಚಿ ಕ್ಯಾಂಪ್‌ನಲ್ಲಿ ಎರಡು ಸಂಘಟನೆಯವರು ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಒಂದೇ ಡೊಳ್ಳು ತಂಡವನು ಗೊತ್ತು ಮಾಡದ್ದರು. ಒಂದು ಗಣಪತಿ ಪೆಂಡಾಲ್‌ ಮುಂಭಾಗ ಡೊಳ್ಳು ಬಾರಿಸುತ್ತಿದ್ದ ಸಂದರ್ಭ ಮತ್ತೊಂದು ಸಂಘಟನೆಯವರು ತಮ್ಮ ಪೆಂಡಾಲ್‌ ಬಳಿ ಬಂದು ಡೊಳ್ಳು ಬಾರಿಸುವಂತೆ ಆಗ್ರಹಿಸಿದರು. ಇದರಿಂದ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.

Police-Jeep-With-Light-New.

ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದಾರೆ. ಈ ಸಂದರ್ಭ ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿ ಗ್ರಾಮಸ್ಥರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ, ಭದ್ರಾವತಿ ಡಿವೈಎಸ್‌ಪಿ ಸೇರಿ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್‌ಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿರುವ ಎಲ್ಲ ಗಣಪತಿ ಮೂರ್ತಿಗಳನ್ನು ಇಂದೇ ವಿಸರ್ಜನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಕೆಲಸಕ್ಕೆ ಸೇರಿದ ಎರಡನೇ ದಿನ ತಿಂಡಿಗೆ ಹೋದವನು ವಾಪಸಾಗಲಿಲ್ಲ, ಆಮೇಲೆ ಮಾಲೀಕನಿಗೆ ಕಾದಿತ್ತು ಆಘಾತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment