ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಡಿಕೆ ಹಾಳೆ (Areca leaf) ವಿಚಾರವಾಗಿ ನಡೆದ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಹೋದರಿ ಮತ್ತು ಆಕೆಯ ಪತಿಯ ವಿರುದ್ಧ ಮಹಿಳೆ (ಹೆಸರು ಗೌಪ್ಯ) ದೂರು ನೀಡಿದ್ದಾರೆ.
ಅಂಗಡಿಯಲ್ಲಿರುವ ಅಡಿಕೆ ಹಾಳೆಯನ್ನು ಉಚಿತವಾಗಿ ತಮಗೆ ನೀಡಬೇಕು ಎಂದು ಮಹಿಳೆಯ ಸಹೋದರಿ ಮತ್ತು ಆಕೆಯ ಪತಿ ಕೇಳಿದ್ದರು. ಅವರ ಬೇಡಿಕೆ ನಿರಾಕರಿಸಿದ್ದಕ್ಕೆ ತಡರಾತ್ರಿ ಮಹಿಳೆಯ ಮನೆಗೆ ಬಂದ ಸಹೋದರಿ ಮತ್ತು ಆಕೆಯ ಪತಿ ಮಹಿಳೆಯ ಮಗಳ ಕೆನ್ನೆಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೆ ಮಹಿಳೆಯ ಮನೆ ಬಾಗಿಲಿಗೆ ದೊಡ್ಡ ಕಲ್ಲು ಎತ್ತಿ ಹಾಕಿದ್ದಾರೆ. ಇದರಿಂದ ಕಬ್ಬಿಣದ ಬಾಗಿಲಿಗೆ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ತುರ್ತಾಗಿ ತನಿಖಾ ಆಯೋಗ ನೇಮಿಸಬೇಕು, ಶಿವಮೊಗ್ಗ ಸಮಾವೇಶದಲ್ಲಿ ಸಾಹಿತಿಗಳ ಪಟ್ಟು, ಕಾರಣವೇನು?

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















