HOSANAGARA NEWS, 2 OCTOBER 2024 : ಬ್ಯಾಟರಿ ಲೈಟ್ನ (Light) ಕಾರಣಕ್ಕಾಗಿ ನೆರೆಹೊರೆ ಮನೆಯವರು ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಾಗಿದೆ.
ಏನಿದು ಪ್ರಕರಣ?
ಹೊಸನಗರ ತಾಲೂಕು ಹೆಗ್ಗರಸು ಗ್ರಾಮದಲ್ಲಿ ಸ್ವಾಮಿ ರಾವ್ ಎಂಬುವವರು ಬ್ಯಾಟರಿ ಲೈಟ್ ಬಿಟ್ಟ ವಿಚಾರ ನೆರೆ ಮನೆಯವರು ಬಡಿದಾಡಿಕೊಂಡಿದ್ದಾರೆ. ಸೆ.27ರಂದು ರಾತ್ರಿ ಘಟನೆ ಸಂಭವಿಸಿದೆ. ಸ್ಯಾಮಿ ರಾವ್ ಅವರ ಕುಟುಂಬ ಮತ್ತು ಪಕ್ಕದ ಸಾಗರ್ ಎಂಬುವವರ ಕುಟುಂಬದವರು ಕೈ ಕೈ ಮಿಲಾಯಿಸಿದ್ದಾರೆ.
ಸ್ವಾಮಿರಾವ್ ಕುಟುಂಬದ ಆರೋಪವೇನು?
ಪಿತೃಪಕ್ಷದ ಪೂಜೆ ಮುಗಿಸಿ ನೆಂಟರನ್ನು ಬೀಳ್ಕೊಡಲು ಸ್ವಾಮಿರಾವ್ ಕುಟುಂಬದವರು ಮನೆಯಿಂದ ಹೊರ ಬಂದಿದ್ದರು. ಆಗ ಸ್ವಾಮಿರಾವ್ ಅವರು ಬ್ಯಾಟರಿ ಲೈಟ್ ಆನ್ ಮಾಡಿದ್ದು ಅದು ಆಕಸ್ಮಿಕವಾಗಿ ಪಕ್ಕದ ಬ್ಯಾಣದ ಮೇಲೆ ಬಿದ್ದಿದೆ. ಅಲ್ಲಿ ಮದ್ಯ ಸೇವಿಸುತ್ತಿದ್ದವರು ಅವಾಚ್ಯವಾಗಿ ನಿಂದಿಸಿದರು. ಅಲ್ಲದೆ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.
ಸಾಗರ್ ಕುಟುಂಬದವರ ಆರೋಪವೇನು?
ಸಾಗರ್ ಮತ್ತು ಅವರ ಸಹೋದರ ಮಾತನಾಡುತ್ತಿದ್ದಾಗ ಸ್ವಾಮಿರಾವ್ ಅವರು ತಮ್ಮ ಮನೆ ಕಾಂಪೌಂಡಿಗೆ ಬ್ಯಾಟರಿ ಲೈಟ್ ಬಿಟ್ಟಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಸ್ವಾಮಿ ರಾವ್ ಅವರು ತಮ್ಮ ಮುಖಕ್ಕೆ ಕಲ್ಲು ತೂರಿದ್ದಾರೆ. ಕಲ್ಲೇಟಿನಿಂದ ನೋವಿಗೆ ಸಾಗರ್ ಜೋರಾಗಿ ಕೂಗಿಕೊಂಡಾಗ ಆತನ ಕುಟುಂಬದವರು ಹೊರ ಬಂದಿದ್ದಾರೆ. ಆಗ ಸ್ವಾಮಿ ರಾವ್ ಅವರ ಕುಟುಂಬದವರು ಮುಖಕ್ಕೆ ಖಾರದ ಪುಡಿ ಎರಚಿ ಥಳಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಹೊಸನಗರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಕರ್ನಾಟಕ ಸಂಘ, ನೂತನ ಕಾರ್ಯಕಾರಿ ಸಮಿತಿಗೆ 15 ಮಂದಿ ಆಯ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200