| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ಹಂದಿ (Pig) ವಿಚಾರವಾಗಿ ಇಬ್ಬರು ಯುವಕರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇನ್ನು ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಾಗಿದೆ.
ಶಿವಮೊಗ್ಗದ ಗೋಪಾಳದ ಕೆಹೆಚ್ಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಅರ್ಜುನ್ ಮತ್ತು ಮಂಜುನಾಥ್ ಮಧ್ಯೆ ಗಲಾಟೆಯಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]()
ಅರ್ಜುನ್ ದೂರಿನಲ್ಲಿ ಏನಿದೆ?
ತಮ್ಮ ಪುತ್ರನನ್ನು ಶಾಲೆಯಿಂದ ಕರೆತರಲು ಬೈಕಿನಲ್ಲಿ ಹೋಗುತ್ತಿದ್ದಾಗ ನಾಲ್ವರು ಯುವಕರು ಹಂದಿ ಕಳ್ಳತನ ಮಾಡುತ್ತಿದ್ದರು. ಬೈಕ್ ನಿಲ್ಲಿಸಿ ತಮ್ಮ ಹಂದಿಗಳನ್ನು ಯಾಕೆ ಕಳ್ಳತನ ಮಾಡುತ್ತಿದ್ದೀರ ಎಂದು ಪ್ರಶ್ನಿಸಿದಾಗ ನಾಲ್ವರು ಯುವಕರು ಅಲ್ಲಿಂದ ಓಡಿ ಹೋಗಿದ್ದಾರೆ. ಮಂಜುನಾಥ ಎಂಬಾತ ತನ್ನ ಬಳಿ ಬಂದು ಮಚ್ಚು ಮತ್ತು ರಿಪೀಸಿನಿಂದ ತಲೆಗೆ ಹೊಡೆದಿದ್ದಾನೆ. ತಾನು ಪ್ರಜ್ಞಾಹೀನನಾಗಿ ಬಿದ್ದಿದ್ದೆ. ಬಳಿಕ ತಮ್ಮ ತಂದೆ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಆರೋಪಿಸಿ ಅರ್ಜುನ್ ದೂರು ನೀಡಿದ್ದಾನೆ.
![]()
ಮಂಜುನಾಥನಿಂದ ಪ್ರತಿ ದೂರು
ಇದಕ್ಕೆ ಮಂಜುನಾಥ್ ಪ್ರತಿದೂರು ನೀಡಿದ್ದಾನೆ. ತಾನು ಹಂದಿ ಸಾಕಾಣಿಕೆ ಮಾಡುತ್ತಿದ್ದು, ಹಂದಿಗಳನ್ನು ನೋಡಲು ಗೋಪಾಳಕ್ಕೆ ಹೋದಾಗ ಘಟನೆ ನಡೆದಿದೆ. ತಾನು ಹಂದಿಗಳನ್ನು ನೋಡುತ್ತಿದ್ದಾಗ ಅರ್ಜುನ್ ಸ್ಥಳಕ್ಕೆ ಬಂದಿದ್ದ. ‘ನಮ್ಮ ಏರಿಯಾಗೆ ಏಕೆ ಬಂದಿದ್ದೀಯ’ ಎಂದು ಪ್ರಶ್ನಿಸಿದ್ದ. ಆಗ ತಾನು ‘ನಮ್ಮ ಐದು ಹಂದಿಗಳನ್ನು ಹಿಡಿದುಕೊಂಡು ಹೋಗಿದ್ದೇಕೆʼ ಎಂದು ವಿಚಾರಿಸಿದ್ದೆ. ಅದಕ್ಕೆ ಅರ್ಜುನ್, ‘ಇನ್ನಷ್ಟು ಹಂದಿಗಳನ್ನು ಹೊಡೆದುಕೊಂಡು ಹೋಗುತ್ತೇನೆʼ ಎಂದು ಬೆದರಿಸಿದ್ದ. ಕೊನೆಗೆ ರಿಪೀಸ್ನಿಂದ ಹಲ್ಲೆ ನಡೆಸಿದ್ದಾನೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ಮಂಜುನಾಥ್ ದೂರು ನೀಡಿದ್ದಾನೆ.
ಘಟನೆ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
![]()
ಇದನ್ನೂ ಓದಿ » ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()