ಲಕ್ಷಾಂತರ ಮೌಲ್ಯದ ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ ಮೂವರ ಮೇಲೆ ಸಾಗರ ಪೊಲೀಸರ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | Ambergris  | 12 ಏಪ್ರಿಲ್ 2022

ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್’ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ.

ಅರ್ಧ ಕೆ.ಜಿ ಅಂಬರ್ಗ್ರೀಸ್ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಸಾಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಅಂಬರ್ಗ್ರೀಸ್ (Ambergris ) ಮಾಹಿತಿಯನ್ನು ಬಾಯಿ ಬಿಟ್ಟಿದ್ದಾರೆ. ಇವರಿಂದ ಅರ್ಧ ಕೆ.ಜಿ.ಯಷ್ಟು ಅಂಬರ್ಗ್ರೀಸ್ ವಶಕ್ಕೆ ಪಡೆಯಲಾಗಿದೆ. ಇದರ ಮಾರುಕಟ್ಟೆ ಮೌಲ್ಯ 50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಸಾಗರದಿಂದ ಮಂಗಳೂರಿಗೆ ಕೊಂಡೊಯ್ದು ಮಾರಾಟಕ್ಕೆ ಇವರು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ತಿಮಿಂಗಿಲ ವಾಂತಿಗೇಕೆ ಇಷ್ಟು ಡಿಮಾಂಡ್?

ತಿಮಿಂಗಿಲ ವಾಂತಿ ಅಥವಾ ಅಂಬರ್ಗ್ರೀಸ್’ಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಇದೆ. ಸ್ಪರ್ಮ್ ತಿಮಿಂಗಲ ಎನ್ನುವ ಪ್ರಭೇದದ ಕರುಳಿನಲ್ಲಿ ಹುಟ್ಟುವ ಘನ ಮೇಣದಂತಹ ಅಂಬರ್ಗ್ರೀಸ್’ಗೆ ಹೆಚ್ಚು ಬೇಡಿಕೆ. ಇದನ್ನು ಸುಗಂಧ ದ್ರವ್ಯ ಮತ್ತು ಮಾದಕ ವಸ್ತು ತಯಾರಿಕೆ ಬಳಕೆ ಮಾಡಲಾಗುತ್ತದೆ. ಆದ್ದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಂಬರ್ಗ್ರೀಸ್’ಗೆ ಹೆಚ್ಚು ಬೇಡಿಕೆ ಇದೆ.

ಮಾರಾಟ, ಸಾಗಣೆ ಅಕ್ರಮ

ಅರಣ್ಯ ಕಾಯ್ದೆ ಅಡಿ ಅಂಬರ್ಗ್ರೀಸ್ ಸಾಗಣೆ ಮತ್ತು ಮಾರಾಟ ನಿಷೇಧ. ಹೀಗಿದ್ದೂ ಸಾಗರದಲ್ಲಿ ಅಂಬರ್ಗ್ರೀಸ್ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಇದರ ಹಿಂದೆ ದೊಡ್ಡ ಜಾಲ ಇರುವ ಕುರಿತು ಪೊಲೀಸರಿಗೆ ಶಂಕೆ ವ್ಯಕ್ತವಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ ಸಾಗರ ವಿಭಾಗದ ಎಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಸಾಗರ ನಗರ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಪ್ಪ, ಪಿಎಸ್ಐ ಟಿ.ಡಿ.ಸಾಗರಕರ್, ಕಾರ್ಗಲ್ ಪಿಎಸ್ಐ ತಿರುಮಲೇಶ್, ಸಿಬ್ಬಂದಿ ಸಂತೋಷ್ ನಾಯ್ಕ್, ಹಜರತ್ ಅಲಿ, ಪ್ರವೀಣ್ ಕುಮಾರ್, ರತ್ನಾಕರ್, ಮಲ್ಲೇಶ್, ಶ್ರೀಧರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ | ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎಂಜಿನಿಯರ್ ಬೈಕ್’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 12, 2022

Leave a Comment