SHIVAMOGGA LIVE NEWS | 6 MAY 2024
SHIMOGA : ಶಿಕ್ಷಕಿಯೊಬ್ಬರ ಬ್ಯಾಂಕ್ ಖಾತೆಯಿಂದ ಏಕಾಏಕಿ 7 ಲಕ್ಷ ರೂ. ಹಣ ನಾಪತ್ತೆಯಾಗಿದೆ. ಹಣ ಕಡಿತದ ಸಾಲು ಸಾಲು ಮೆಸೇಜ್ ಬಂದಾಗ ಶಿಕ್ಷಕಿ ಆಘಾತಕ್ಕೊಂಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಏನಿದು ಕೇಸ್? ಹಣ ಕಡಿತವಾಗಿದ್ದೇಕೆ?
ಶಿವಮೊಗ್ಗದ ಶಿಕ್ಷಕಿಯೊಬ್ಬರು ಯುನಿಯನ್ ಬ್ಯಾಂಕ್ನಲ್ಲಿ ಖಾತೆ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಹೊಂದಿದ್ದಾರೆ. ಮೇ 3ರಂದು ಮಧ್ಯಾಹ್ನ ಶಿಕ್ಷಕಿಯ ಮೊಬೈಲ್ಗೆ ಯುನಿಯನ್ ಬ್ಯಾಂಕ್ನಿಂದ ಸಾಲು ಸಾಲು ಮೆಸೇಜ್ ಬಂದಿವೆ. ಒಮ್ಮೆ 3 ಲಕ್ಷ, ಎರಡನೇ ಬಾರಿ 2 ಲಕ್ಷ, ಮೂರನೆ ಬಾರಿ 2 ಲಕ್ಷ ರೂ. ಹಣ ಕಡಿತವಾಗಿದೆ ಎಂದು ಮೆಸೇಜ್ನಲ್ಲಿ ತಿಳಿಸಲಾಗಿತ್ತು. ಕೂಡಲೆ ಹೆಲ್ಪ್ಲೈನ್ ನಂಬರ್ಗೆ ಕರೆ ಮಾಡಿದಾಗ, ನಿಮ್ಮ ಖಾತೆಯಲ್ಲಿರುವ ಉಳಿಕೆ ಹಣವನ್ನು ಕೂಡಲೆ ಬೇರೆ ಖಾತೆ ವರ್ಗಾಯಿಸಿ ಎಂದು ಸೂಚಿಸಿದ್ದರು.
ಶಿಕ್ಷಕಿ ಕೂಡಲೆ ತಮ್ಮ ಖಾತೆಯಲ್ಲಿದ್ದ ಉಳಿಕೆ ಹಣದ ಪೈಕಿ 50 ಸಾವಿರ ರೂ. ಅನ್ನು ಮಗಳ ಖಾತೆಗೆ ವರ್ಗಾಯಿಸಿದ್ದರು. ಬ್ಯಾಂಕ್ನಲ್ಲಿ ವಿಚಾರಿಸಿದಾಗ ಶಿಕ್ಷಕಿಯ ವೈಯಕ್ತಿಕ ಮಾಹಿತಿ ಕದ್ದು, ಒಟಿಪಿ ಶೇರ್ ಮಾಡದೆ 7 ಲಕ್ಷ ರೂ. ಹಣವನ್ನು ಬೇರೆ ಬೇರೆ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಬೆಳಗೆದ್ದು ಮನೆ ಪಕ್ಕದ ಗೋಡನ್ಗೆ ಹೋದವರಿಗೆ ಕಾದಿತ್ತು ಆಘಾತ, ಒಂದೇ ರೀತಿ ಎರಡು ಪ್ರತ್ಯೇಕ ಪ್ರಕರಣ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200