SHIVAMOGGA LIVE NEWS | 11 NOVEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
THIRTHAHALLI : ಟೆಲಿಗ್ರಾಂನಲ್ಲಿ ರಾತ್ರಿ ಬಂದ ಮೆಸೇಜ್ನಿಂದ ಇಂಜಿನಿಯರ್ (engineer) ಒಬ್ಬರು 93 ಸಾವಿರ ರೂ. ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂಜಿನಿಯರ್ ಒಬ್ಬನ (ಹೆಸರು ಗೌಪ್ಯ) ಟೆಲಿಗ್ರಾಂಗೆ ನ.4ರಂದು A DAILY TASKS ಎಂಬ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ಟಾಸ್ಕ್ಗಳನ್ನು ಪೂರೈಸುವ ಪಾರ್ಟ್ ಟೈಮ್ ಉದ್ಯೋಗ ಎಂದು ನಂಬಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು. ಗೂಗಲ್ ರಿವ್ಯೂಸ್ ಎಂದು ತಿಳಿಸಿ ಮೊದಲ ದಿನ 300 ರೂ.ಗಳನ್ನು ಇಂಜಿನಿಯರ್ (engineer) ಖಾತೆಗೆ ವರ್ಗಾಯಿಸಿದರು.
ಇದನ್ನೂ ಓದಿ- ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಸರ್ಕಲ್ನಲ್ಲಿ ಬೃಹತ್ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?
ನಂತರ ಪ್ರೀಪೇಡ್ ಟಾಸ್ಕ್ ಎಂದು 1 ಸಾವಿರ ರೂ. ಹಾಕಿಸಿಕೊಂಡಿದ್ದು 1300 ರೂ. ಹಣವನ್ನು ಇಂಜಿನಿಯರ್ಗೆ ವರ್ಗಾಯಿಸಿದ್ದರು. ಒಮ್ಮೆ 3 ಸಾವಿರ ರೂ. ಹಣ ಹಾಕಿಸಿಕೊಂಡಿದ್ದು ಟಾಸ್ಕ್ ಪೂರೈಸಿದರು ಹಣ ಮರಳಿಸಲಿಲ್ಲ. ಹೆಚ್ಚು ಟಾಸ್ಕ್ಗಳನ್ನು ಪೂರೈಸಿದರೆ ಒಟ್ಟಿಗೆ ಹಣ ಹಿಂತಿರುಗಿಸುವುದಾಗಿ ನಂಬಿಸಿ 93 ಸಾವಿರ ರೂ. ಹಣ ಹಾಕಿಸಿಕೊಂಡು ವಂಚಿಸಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






