SHIVAMOGGA LIVE NEWS | 26 SEPTEMBER 2023
SHIMOGA : ಕುಂದಾಪುರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ ಹತ್ತುವ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ (Vanity Bag) ಚಿನ್ನಾಭರಣ ಇದ್ದ ಪರ್ಸ್ ಕಳ್ಳತನವಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇಂತಹ ಪ್ರಕರಣಗಳು ಹೆಚ್ಚಾಗಿವೆ.
ಕುಂದಾಪುರದ ರತ್ನಾ ಆರ್.ಭಟ್ ಎಂಬುವವರು ಬೆಂಗಳೂರಿನಲ್ಲಿ ಮದುವೆ ಸಮಾರಂಭಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಯನಗರದಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದಿದ್ದು ಸೆ.23ರಂದು ಕುಂದಾಪುರಕ್ಕೆ ತೆರಳಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ತೆರಳಿದ್ದರು. ಪತಿಯೊಂದಿಗೆ ಬಸ್ ಹತ್ತಿ ಕುಳಿತಾಗ ವ್ಯಾನಿಟಿ ಬ್ಯಾಗ್ ಜಿಪ್ ತೆಗೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ವ್ಯಾನಿಟಿ ಬ್ಯಾಗಿನೊಳಗಿದ್ದ ಪರ್ಸ್ ಕಳ್ಳತನವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ KSRTC ಬಸ್ ನಿಲ್ದಾಣಕ್ಕೆ ಕಂಟಕವಾಯ್ತು 3ನೇ ಗೇಟ್, ಎಚ್ಚೆತ್ತುಕೊಳ್ಳದಿದ್ದರೆ ಅಪಘಾತ ಫಿಕ್ಸ್
ರತ್ನಾ ಆರ್.ಭಟ್ ಅವರ ಪರ್ಸ್ನಲ್ಲಿ 74 ಗ್ರಾಂ ತೂಕ 2.59 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ ಇದ್ದವು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200