ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಅಡಕೆ ಸಸಿಗಳನ್ನು ಕತ್ತರಿಸಿದ ದುಷ್ಕರ್ಮಿಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ |HOLEHONNURU NEWS | 24 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಮೀನಿನಲ್ಲಿ ಬೆಳೆದಿದ್ದ ಸುಮಾರು ಮೂರೂವರೆ ವರ್ಷದ ಅಡಕೆ ಸಸಿಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ಹಾಕಿದ್ದಾರೆ. 39 ಸಸಿಗಳಿಗೆ ಕೊಡಲಿ ಬೀಸಲಾಗಿದೆ.

ಭದ್ರಾವತಿ ತಾಲೂಕು ದಾಸರ ಕಲ್ಲಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಅಣ್ಣಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಅಡಕೆ ಸಸಿಗಳನ್ನು ಕಡಿಯಲಾಗಿದೆ.

ADVT JULY NANJAPPA HOSPITAL HOME LAB TESTING

ಸಂಜೆ ಅಣ್ಣಪ್ಪ ಅವರ ಚಿಕ್ಕಪ್ಪ ತೋಟದಲ್ಲಿ ದನಗಳನ್ನು ಮೇಯಿಸಿಕೊಂಡು ಬಂದಿದ್ದಾರೆ. ಆಗ ತೋಟದಲ್ಲಿ ಎಲ್ಲಾ ಸಸಿಗಳು ಚನ್ನಾಗಿದ್ದವು. ಬೆಳಗ್ಗೆ ಪಕ್ಕದ ಜಮೀನಿನ ಮಾಲೀಕರು ಅಣ್ಣಪ್ಪ ಅವರ ಮನೆ ಬಳಿಗೆ ಬಂದು ಯಾರೋ ಸಸಿಗಳನ್ನು ಕಡಿದಿದ್ದಾರೆ ಎಂದು ತಿಳಿಸಿದ್ದಾರೆ. ಮನೆಯವರೆಲ್ಲ ತೋಟಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

ದುಷ್ಕರ್ಮಿಗಳು 39 ಸಸಿಗಳನ್ನು ಕೊಡಲಿಯಿಂದ ಕಡಿದು ಹಾಕಿರುವ ಶಂಕೆ ಇದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment