SHIVAMOGGA LIVE NEWS | 1 ಮಾರ್ಚ್ 2022
ಮನೆಯ ಕಣದಲ್ಲಿ ಒಣಗಿಸಲು ಹಾಕಿದ್ದ ಅಡಕೆ ರಾತ್ರೋರಾತ್ರಿ ನಾಪತ್ತೆ ಆಗಿದೆ. 1.50 ಲಕ್ಷ ಮೌಲ್ಯದ ಅಡಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾಗರ ತಾಲೂಕು ಯಲಗಳಲೆ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ತಮ್ಮ ತೋಟದಲ್ಲಿ ಬೆಳೆದ ಸಿಪ್ಪೆಗೋಟು ಅಡಕೆಯನ್ನು ಅವರು ಮನೆ ಹಿಂಭಾಗದ ಕಣದಲ್ಲಿ ಒಣಗಿಸಿದ್ದರು.
ಕಳೆದ ಶುಕ್ರವಾರ ಸಂಜೆ ಒಣಗಿಸಿದ್ದ ಅಡಕೆಯನ್ನ ನಾಗರಾಜ ಅವರು ನೋಡಿಕೊಂಡು ಬಂದಿದ್ದರು. ಅದನ್ನು ಸರಿ ಮಾಡಿಟ್ಟು ಬಂದಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಅಷ್ಟೂ ಅಡಕೆ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದರೂ ಅಡಕೆಯ ಸುಳಿವು ಸಿಕ್ಕಿಲ್ಲ.
ಕಳುವಾದ ಅಡಕೆಯ ಮೌಲ್ಯದ ಸುಮಾರು 1.50 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಆಗುಂಬೆ | ಒಂದೂವರೆ ಕ್ವಿಂಟಾಲ್ ಅಡಕೆ ಕದ್ದವನು ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200