ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 ಮಾರ್ಚ್ 2022
ಮನೆಯ ಕಣದಲ್ಲಿ ಒಣಗಿಸಲು ಹಾಕಿದ್ದ ಅಡಕೆ ರಾತ್ರೋರಾತ್ರಿ ನಾಪತ್ತೆ ಆಗಿದೆ. 1.50 ಲಕ್ಷ ಮೌಲ್ಯದ ಅಡಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾಗರ ತಾಲೂಕು ಯಲಗಳಲೆ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ತಮ್ಮ ತೋಟದಲ್ಲಿ ಬೆಳೆದ ಸಿಪ್ಪೆಗೋಟು ಅಡಕೆಯನ್ನು ಅವರು ಮನೆ ಹಿಂಭಾಗದ ಕಣದಲ್ಲಿ ಒಣಗಿಸಿದ್ದರು.
ಕಳೆದ ಶುಕ್ರವಾರ ಸಂಜೆ ಒಣಗಿಸಿದ್ದ ಅಡಕೆಯನ್ನ ನಾಗರಾಜ ಅವರು ನೋಡಿಕೊಂಡು ಬಂದಿದ್ದರು. ಅದನ್ನು ಸರಿ ಮಾಡಿಟ್ಟು ಬಂದಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಅಷ್ಟೂ ಅಡಕೆ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದರೂ ಅಡಕೆಯ ಸುಳಿವು ಸಿಕ್ಕಿಲ್ಲ.
ಕಳುವಾದ ಅಡಕೆಯ ಮೌಲ್ಯದ ಸುಮಾರು 1.50 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಆಗುಂಬೆ | ಒಂದೂವರೆ ಕ್ವಿಂಟಾಲ್ ಅಡಕೆ ಕದ್ದವನು ಅರೆಸ್ಟ್
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















