ಕಣದಲ್ಲಿ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 ಮಾರ್ಚ್ 2022

ಮನೆಯ ಕಣದಲ್ಲಿ ಒಣಗಿಸಲು ಹಾಕಿದ್ದ ಅಡಕೆ ರಾತ್ರೋರಾತ್ರಿ ನಾಪತ್ತೆ ಆಗಿದೆ. 1.50 ಲಕ್ಷ ಮೌಲ್ಯದ ಅಡಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Nanjappa Hospital Cancer Care

ಸಾಗರ ತಾಲೂಕು ಯಲಗಳಲೆ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ತಮ್ಮ ತೋಟದಲ್ಲಿ ಬೆಳೆದ ಸಿಪ್ಪೆಗೋಟು ಅಡಕೆಯನ್ನು ಅವರು ಮನೆ ಹಿಂಭಾಗದ ಕಣದಲ್ಲಿ ಒಣಗಿಸಿದ್ದರು.

ಕಳೆದ ಶುಕ್ರವಾರ ಸಂಜೆ ಒಣಗಿಸಿದ್ದ ಅಡಕೆಯನ್ನ ನಾಗರಾಜ ಅವರು ನೋಡಿಕೊಂಡು ಬಂದಿದ್ದರು. ಅದನ್ನು ಸರಿ ಮಾಡಿಟ್ಟು ಬಂದಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಅಷ್ಟೂ ಅಡಕೆ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದರೂ ಅಡಕೆಯ ಸುಳಿವು ಸಿಕ್ಕಿಲ್ಲ.

ಕಳುವಾದ ಅಡಕೆಯ ಮೌಲ್ಯದ ಸುಮಾರು 1.50 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಆಗುಂಬೆ | ಒಂದೂವರೆ ಕ್ವಿಂಟಾಲ್ ಅಡಕೆ ಕದ್ದವನು ಅರೆಸ್ಟ್

Shimoga Live Reach Report

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 1, 2022

Leave a Comment