ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ನವೆಂಬರ್ 2021
ರಾತ್ರೋರಾತ್ರಿ ಅಡಕೆ ಮರಗಳಿಂದ ಕೊನೆಗಳನ್ನು ಕೊಯ್ದು ಕದ್ದೊಯ್ಯಲಾಗಿದೆ. ಸುಮಾರು ಒಂದು ಕ್ವಿಂಟಾಲ್’ನಷ್ಟು ಅಡಕೆ ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ತಾಲೂಕು ರಾಮನಗರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಲೋಕೇಶ್ವರಪ್ಪ ಎಂಬುವವರಿಗೆ ಸೇರಿದ ಅಡಕೆ ತೋಟದಲ್ಲಿ ನಿತ್ಯ ಅಡಕೆ ಕಳ್ಳತನವಾಗುತ್ತಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ರಾತ್ರಿ ವೇಳೆ ಲೋಕೇಶ್ವರಪ್ಪ ಅವರು ಪರಿಶೀಲನೆಗಾಗಿ ಅಡಕೆ ತೋಟಕ್ಕೆ ಹೋದಾಗ ಕಳ್ಳನೊಬ್ಬ ಕೊನೆ ಇಳಿಸುತ್ತಿರುವುದು ಕಂಡು ಬಂದಿದೆ.
ಲೋಕೇಶ್ವರಪ್ಪ ಅವರು ಬಂದಿದ್ದನ್ನು ಗಮನಿಸಿದ ಕಳ್ಳ ಪರಾರಿಯಾಗಿದ್ದಾನೆ. ತೋಟದಲ್ಲಿ ಪರಿಶೀಲನೆ ನಡೆಸಿದಾಗ ಸುಮಾರು 10 ಮರಗಳಲ್ಲಿ 20ಕ್ಕೂ ಹೆಚ್ಚು ಕೊನೆಗಳನ್ನು ಕೊಯ್ದು ಕಳ್ಳತನ ಮಾಡಲಾಗಿದೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






