SHIVAMOGGA LIVE NEWS | 3 JUNE 2024
SORABA : ಅಡಿಕೆ, ಗೇರುಬೀಜ ಕಳವು ಮಾಡಿದ್ದ ಆರೋಪಿಯನ್ನು (Thief) ಸೊರಬ ಪೊಲೀಸರು ಬಂಧಿಸಿದ್ದು ನಾಲ್ವರು ತಲೆಮರೆಸಿಕೊಂಡಿದ್ದಾರೆ. ಬಂಧಿತನಿಂದ 4.70 ಲಕ್ಷ ರೂ. ನಗದು, 8 ಲಕ್ಷ ರೂ. ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಶಿಕಾರಿಪುರದ ಜಕ್ಕನಹಳ್ಳಿಯ ನಂದೀಶ್ ಬಂಧಿತ.
![]() |
ತಾಲೂಕಿನ ಮೂಡುಗೋಡು ಗ್ರಾಮದಲ್ಲಿ ಜಯಕುಮಾರ್ ಎಂಬುವರು ತಮ್ಮ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಡಕೆ, ಗೇರುಬೀಜ ಕಳ್ಳತನ ಆಗಿರುವ ಕುರಿತು ಮೇ 10ರಂದು ಸೊರಬ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಾವಲಿ ಗ್ರಾಮದ ಸಮೀಪ ಆರೋಪಿ ಬಂಧಿಸಿದ್ದಾರೆ.
ಇದನ್ನೂ ಓದಿ – ಮೈಸೂರು – ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಹೇಗಾಯ್ತು ಘಟನೆ?
ಡಿವೈಎಸ್ಪಿ ಕೆ.ಇ.ಕೇಶವ ಮೇಲ್ವಿಚಾರಣೆಯಲ್ಲಿ ಸೊರಬ ಇನ್ಸ್ಪೆಕ್ಟರ್ ರಮೇಶ್ ರಾವ್ ನೇತೃತ್ವದಲ್ಲಿ ಪಿಎಸ್ಐ ಹೆಚ್.ಎನ್.ನಾಗರಾಜ್, ಎಎಸ್ಐಗಳಾದ ಲಿಂಗರಾಜ, ಪ್ರಭಾಕರ, ಸಿಬ್ಬಂದಿ ರಾಜುನಾಯ್, ನಾಗರಾಜ, ಅಶೋಕ, ನಾಗೇಶ್, ಕೆ.ಎನ್.ಲೋಕೇಶ್, ರಾಘವೇಂದ್ರ, ಲೋಕೇಶ್, ಆನವಟ್ಟಿ ಠಾಣೆಯ ಮಂಜುನಾಥ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200