HOLEHONNURU NEWS, 21 SEPTEMBER 2024 : ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು (Areca Tree) ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ನಾಶ ಮಾಡಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.
ಕಲ್ಲಿಹಾಳ್ ಗ್ರಾಮದ ಷಹಿಮುನ್ನಿಸ ಅವರಿಗೆ ಸೇರಿದ 1.6 ಎಕರೆ ಜಮೀನಿನಲ್ಲಿ ಸುಮಾರು 34 ವರ್ಷದ ಫಲ ನೀಡುತ್ತಿದ್ದ ಅಡಿಕೆ ಮರಗಳಿದ್ದವು. ಬುಧವಾರ ಬೆಳಗ್ಗೆ ಅಡಕೆ ಕಟಾವು ಮಾಡಬೇಕಿತ್ತು.
ಮಂಗಳವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಸುಮಾರು 700 ಅಡಿಕೆ ಮರಗಳನ್ನು ಗರಗಸದಿಂದ ಅರ್ಧಕ್ಕೆ ಕತ್ತರಿಸಿದ್ದಾರೆ. ಇದರಿಂದ ಕೆಲ ಮರಗಳು ಧರೆಗುರುಳಿದ್ದು, ತೋಟ ದಲ್ಲಿ ಹಸಿ ಅಡಿಕೆ ಮಣ್ಣುಪಾಲಾಗಿದೆ. ಈ ಕೃತ್ಯದಿಂದ ಸುಮಾರು 70 ಲಕ್ಷ ರೂ. ಗಳಿಗೂ ಹೆಚ್ಚಿನ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200