ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
HOLEHONNURU NEWS, 21 SEPTEMBER 2024 : ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು  (Areca Tree) ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ನಾಶ ಮಾಡಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಕಲ್ಲಿಹಾಳ್ ಗ್ರಾಮದ ಷಹಿಮುನ್ನಿಸ ಅವರಿಗೆ ಸೇರಿದ 1.6 ಎಕರೆ ಜಮೀನಿನಲ್ಲಿ ಸುಮಾರು 34 ವರ್ಷದ ಫಲ ನೀಡುತ್ತಿದ್ದ ಅಡಿಕೆ ಮರಗಳಿದ್ದವು. ಬುಧವಾರ ಬೆಳಗ್ಗೆ ಅಡಕೆ ಕಟಾವು ಮಾಡಬೇಕಿತ್ತು.

areca-tree-cut-by-misrceants.

ಮಂಗಳವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಸುಮಾರು 700 ಅಡಿಕೆ ಮರಗಳನ್ನು ಗರಗಸದಿಂದ ಅರ್ಧಕ್ಕೆ ಕತ್ತರಿಸಿದ್ದಾರೆ. ಇದರಿಂದ ಕೆಲ ಮರಗಳು ಧರೆಗುರುಳಿದ್ದು, ತೋಟ ದಲ್ಲಿ ಹಸಿ ಅಡಿಕೆ ಮಣ್ಣುಪಾಲಾಗಿದೆ. ಈ ಕೃತ್ಯದಿಂದ ಸುಮಾರು 70 ಲಕ್ಷ ರೂ. ಗಳಿಗೂ ಹೆಚ್ಚಿನ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು

Leave a Comment