ಕುಡಿಯಲು ಹಣ ಕೇಳಿದ್ದಕ್ಕೆ ಯುವಕನ ಹೊಟ್ಟೆ, ಎದೆಗೆ ಚಾಕು ಇರಿತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕುಡಿಯಲು ಹಣ ಕೊಡುವಂತೆ ಕೇಳಿದ್ದಕ್ಕೆ ಸ್ನೇಹಿತರಿಬ್ಬರ ಮಧ್ಯೆ ಜಗಳವಾಗಿದ್ದು, ಒಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ತಿಕ್ (22) ಗಾಯಗೊಂಡಿದ್ದಾನೆ. ಈತನ ಸ್ನೇಹಿತ ಆನಂದ್ (25) ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಲಕ್ಷ್ಮೀ ಟಾಕೀಸ್ ಬಳಿ ಇರುವ ವೈನ್ ಶಾಪ್ ಒಂದರ ಮುಂದೆ ಘಟನೆ ಸಂಭವಿಸಿದೆ.

NH nephrolody%2Bad %2Bkannada 10

‘ಕುಡಿಸುವಂತೆ ಕೇಳಿದ್ದಕ್ಕೆ ಇರಿತ’

ಮದ್ಯ ಕುಡಿಸುವಂತೆ ಕಾರ್ತಿಕ್ ತನ್ನ ಸ್ನೇಹಿತ ಆನಂದ್’ಗೆ ಕೇಳಿಕೊಂಡಿದ್ದ. ಕುಡಿಸದಿದ್ದರೆ ನೂರು ರೂ. ಹಣ ಕೊಡುವಂತೆ ಒತ್ತಾಯಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆನಂದ್ ಜಗಳವಾಡಿ, ಹೊಡೆದಿದ್ದ ಎಂದು ಆರೋಪಿಸಲಾಗಿದೆ.

ನಂತರ ಲಕ್ಷ್ಮೀ ಟಾಕಿಸ್ ಬಳಿ ವೈನ್ ಶಾಪ್ ಒಂದರಲ್ಲಿ ಆನಂದ್ ಮದ್ಯ ಸೇವಿಸುತ್ತಿದ್ದ. ಇದನ್ನು ಗಮನಿಸಿದ ಕಾರ್ತಿಕ್, ತಾನು ಕೇಳಿದಾಗ ಕೊಡಿಸಲಿಲ್ಲವೇಕೆ ಎಂದು ಪ್ರಶ್ನಿಸಿದ್ದಾನೆ. ಅಲ್ಲದೆ ಆನಂದ್ ತರಿಸಿಕೊಂಡಿದ್ದ ಬಾಟಲಿಯನ್ನು ಎತ್ತಿಕೊಂಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಆನಂದ್ ತನ್ನ ಜೇಬಿನಲ್ಲಿದ್ದ ಚಾಕು ತೆಗೆದು ಕಾರ್ತಿಕ್ ಹೊಟ್ಟೆಗೆ, ಎದೆ ಭಾಗಕ್ಕೆ ಚುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment