SHIVAMOGGA LIVE | 29 MAY 2023
SHIMOGA : ಕೊಟ್ಟ ಸಾಲದ ಹಣ (Money) ಮರಳಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ವಿವಿಧೆಡೆ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ. ಸೋಮಿನಕೊಪ್ಪದ ಇಮ್ರಾನ್ ಎಂಬುವವರ ಮೇಲೆ ಹಲ್ಲೆಯಾಗಿದ್ದು, ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗೋವಿಂದ ಎಂಬಾತನು ಸೇರಿ ನಾಲ್ವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಗೋವಿಂದ ಎಂಬಾತನಿಗೆ ಸಾಲ (Money) ನೀಡಿದ್ದ ಇಮ್ರಾನ್ ಹಣ ಹಿಂತಿರುಗಿಸುವಂತೆ ಕೇಳಿದ್ದರು. ಹಣ ಕೊಡುವುದಾಗಿ ಫೋನ್ ಮಾಡಿದ್ದ ಆತ ಶಿವಮೊಗ್ಗದ ಬಾರ್ ಒಂದರ ಬಳಿ ಬರುವಂತೆ ತಿಳಿಸಿದ್ದ. ಅಂತಿಯೇ ಇಮ್ರಾನ್ ಬಂದಿದ್ದು, ಗೋವಿಂದನೂ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬಂದಿದ್ದ. ಕಾರಿನಲ್ಲಿದ್ದವರು ಬಲವಂತವಾಗಿ ಇಮ್ರಾನ್ನನ್ನು ಹತ್ತಿಸಿಕೊಂಡು ಹೊಳೆಬೆನವಳ್ಳಿ ಕ್ರಾಸ್ವರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಇಮ್ರಾನ್ ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ – ಬೈಪಾಸ್ ರಸ್ತೆಯಲ್ಲಿ ಹಿಟ್ ಅಂಡ್ ರನ್ ಅಪಘಾತ, ತಪ್ಪಿದ ಭಾರಿ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ರಾತ್ರಿ 10.30ರ ಹೊತ್ತಿಗೆ ಇಮ್ರಾನ್ ಸಹೋದರನಿಗೆ ಕರೆ ಮಾಡಿ ಇಮ್ರಾನ್ನನ್ನು ಕರೆದೊಯ್ಯುವಂತೆ ಆರೋಪಿಗಳು ತಿಳಿಸಿದ್ದಾರೆ. ಬಿ.ಹೆಚ್.ರಸ್ತೆಯ ಬಾರ್ ಬಳಿ ಇಮ್ರಾನ್ನನ್ನು ಬಿಟ್ಟಿದ್ದಾರೆ. ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಇಮ್ರಾನ್, ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ