ಶಿವಮೊಗ್ಗದ ಲೈವ್.ಕಾಂ | KUMSI NEWS | 4 ಫೆಬ್ರವರಿ 2022
ಬಾಲಕನಿಗೆ ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದ ತಂದೆ, ತಾಯಿ ಮೇಲೆಯೇ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ತಾಲೂಕು ಕೊನಗವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬಾಲಕನಿಗೆ ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದ ತಂದೆ-ತಾಯಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಜೀವ ಬೆದರಿಕೆ ಹಾಕಲಾಗಿದೆ.
ಹೇಗಾಯ್ತು ಘಟನೆ?
ಕೊನಗವಳ್ಳಿಯ ರೂಪಾ, ಆಕೆಯ ಪತಿ ರುದ್ರೇಶ್ ಮತ್ತು ಪುತ್ರ ಪ್ರಮೋದ್ ಹಲ್ಲೆಗೆ ಒಳಗಾದವರು. ಅದೇ ಗ್ರಾಮದ ಉಮೇಶ್, ಶಿಲ್ಪಾ ಮತ್ತು ಕಾಂತಾ ಹಲ್ಲೆ ನಡೆಸಿದವರು.
7ನೇ ತರಗತಿ ಓದುತ್ತಿರುವ ಪ್ರಮೋದ್ ಮಂಗಳವಾರ ಸಂಜೆ ಪಕ್ಕದ ಕೇರಿಯಲ್ಲಿ ನೋಟ್ ಬುಕ್ ತರಲು ಹೋಗಿದ್ದ ವೇಳೆ ಉಮೇಶ್ ಅವರು ಸಾಕಿದ್ದ ನಾಯಿ ಕಚ್ಚಿತ್ತು. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ರೂಪಾ ಮತ್ತು ರುದ್ರೇಶ್ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಜತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About Shivamogga Live | Shimoga Police
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200