SHIVAMOGGA LIVE | 8 ಮಾರ್ಚ್ 2022
ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ.
ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ.
ಚಾಕು ಇರಿತಕ್ಕೆ ಕಾರಣವೇನು?
ಪಾಚಾ ಸಾಬ್ ಮತ್ತು ಆರ್ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ ಆಗಿದೆ. ಆಗ ಚಾಕುವಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.
ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.