ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಮಹಿಳೆಯೊಬ್ಬರು ಸ್ನಾನ ಮಾಡುವಾಗ ಬಾತ್ ರೂಂ ವೆಂಟಿಲೇಟರ್’ನಿಂದ ಕದ್ದು ನೋಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರು ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಕೊಲೆ ಮಾಡುವುದಾಗಿಯು ಬೆದರಿಕೆ ಒಡ್ಡಿದ್ದಾರೆ.
ಶಿವಮೊಗ್ಗದ ಟಿಪ್ಪು ನಗರದಲ್ಲಿ ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಮಹಿಳೆ ಸ್ನಾನ ಮಾಡುವಾಗ ಸಯ್ಯದ್ ಹುಸೇನ್ ಎಂಬಾತ ಕದ್ದು ನೋಡಿದ್ದಾನೆ. ಇದನ್ನು ಅರಿತ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಸಯ್ಯದ್ ಹುಸೇನ್’ನನ್ನು ಹಿಡಿದು, ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.
ಮಚ್ಚು ಹಿಡಿದು ಬಂದರು
ಸಯ್ಯದ್ ಹುಸೇನ್, ಸಯ್ಯದ್ ಇಮ್ರಾನ್ ಇಬ್ಬರು ಶುಕ್ರವಾರ ರಾತ್ರಿ ಮಹಿಳೆ ಮನೆ ಬಳಿಗೆ ಬಂದು ಜಗಳವಾಡಿದ್ದಾರೆ. ಮಹಿಳೆ ಮಗ ಮನೆಯಿಂದ ಹೊರ ಬಂದು ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ.
ಮಹಿಳೆಯ ಮಗನ ಕಿವಿ, ಎಡಗೈ ಹೆಬ್ಬರಳಿಗೆ ಗಾಯವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ | ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಡಬಲ್ ಮರ್ಡರ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200