| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | ASSAULT| 05 ಮೇ 2022
ಶಿವಮೊಗ್ಗದ KSRTC ಬಸ್ ನಿಲ್ದಾಣದ ಮುಂಭಾಗ ಶಿವಮೊಗ್ಗ- ಭದ್ರಾವತಿ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಹೆಲ್ಮೆಟ್’ನಿಂದ ಹೊಡೆದಿದ್ದಾನೆ. ಡ್ರೈವರ್ ಮತ್ತು ನಿಲ್ದಾಣಾಧಿಕಾರಿ ಅವರು ಜಗಳ ಬಿಡಿಸಿದ್ದಾರೆ.
ಕಂಡಕ್ಟರ್ ನಾಗರಾಜ್ ಹಲ್ಲೆಗೊಳಗಾದವರು. ನಾಗರಾಜ್ ಅವರು ಶಿವಮೊಗ್ಗ- ಭದ್ರಾವತಿ KSRTC ಬಸ್ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಲ್ದಾಣದ ಮುಂದೆ ಭದ್ರಾವತಿಗೆ ತೆರಳುವ ಬಸ್ಸುಗಳು ನಿಲ್ಲುವ ಪ್ಲಾಟ್ ಫಾರಂನಲ್ಲಿ ನಿಂತಿದ್ದಾಗ, ಮನೆಯವರು ಕರೆ ಮಾಡಿದ್ದಾರೆ.
ನಾಗರಾಜ್ ಅವರು ಮೊಬೈಲ್’ನಲ್ಲಿ ಮಾತನಾಡುತ್ತಿದ್ದಾಗ ವ್ಯಕ್ತಿಯೊಬ್ಬ ಏಕಾಏಕಿ ದಾಳಿ ಮಾಡಿದ್ದಾನೆ. ‘ಮೊಬೈಲ್’ನಲ್ಲಿ ಹುಡುಗಿಯರ ಜೊತೆಗೆ ಮಾತನಾಡುತ್ತಿದ್ದೀಯಾ’ ಎಂದು ಆರೋಪಿಸಿ, ತನ್ನ ಬಳಿ ಇದ್ದ ಹೆಲ್ಮೆಟ್’ನಿಂದ ಕಂಡಕ್ಟರ ನಾಗರಾಜ್ ಅವರಿಗೆ ಹೊಡೆದಿದ್ದಾನೆ. ಬಸ್ ಚಾಲಕ ಕೊಳ್ಳಿ ಬಸವರಾಜ್ ಮತ್ತು ನಿಲ್ದಾಣಾಧಿಕಾರಿ ಲಕ್ಷ್ಮಣ್ ಅವರ ತಕ್ಷಣ ಬಂದು ಜಗಳ ಬಿಡಿಸಿದ್ದಾರೆ.
ಜಗಳ ಬಿಡಿಸಿದ ಬಳಿಕ ಹಲ್ಲೆ ನಡೆಸಿದವನ ಹೆಸರು ವಿಚಾರಿಸಿದಾಗ ಚಾಂದ್ ಪಾಷಾ ಎಂದು ಗೊತ್ತಾಗಿದೆ. ಕರ್ತವ್ಯದಲ್ಲಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಿದವನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕಂಡಕ್ಟರ್ ನಾಗರಾಜ್ ಅವರ ದೂರ ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ KSRTC ಬಸ್ ನಿಲ್ದಾಣಕ್ಕೆ ಲ್ಯಾಪ್ ಟಾಪ್ ಜೊತೆ ಬಂದ ವಿದ್ಯಾರ್ಥಿನಿಗೆ ಶಾಕ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()