ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021
ಸೊಪ್ಪಿನ ರೇಟಿನ ವಿಚಾರವಾಗಿ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಶಿವಮೊಗ್ಗದ ತಿಲಕ ನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೊಪ್ಪು ಮಾರಾಟಗಾರನಿಗೆ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಸೊಪ್ಪು ಮಾರಾಟ ಮಾಡುತ್ತಿದ್ದ ಚಿಕ್ಕಲ್’ನ ಭರತ್ ಕುಮಾರ್ ಗಾಯಗೊಂಡಿದ್ದಾರೆ. ಸೊಪ್ಪು ಕೊಳ್ಳಲು ಬಂದ ಮಹಿಳೆ ಮತ್ತು ಅವರ ಪುತ್ರನ ವಿರುದ್ಧ ದೂರು ದಾಖಲಾಗಿದೆ.
ಸೊಪ್ಪಿನ ರೇಟಿನ ವಿಚಾರಕ್ಕೆ ಕಿರಿಕ್
ಭರತ್ ಕುಮಾರ್ ಅವರು ಸೊಪ್ಪು ಮಾರಾಟ ಮಾಡುತ್ತ ತಿಲಕನಗರಕ್ಕೆ ಬಂದಿದ್ದರು. ಮಹಿಳೆಯೊಬ್ಬರು ಸೊಪ್ಪು ಕೊಳ್ಳಲು ಬಂದಿದ್ದಾರೆ. ರೇಟ್ ವಿಚಾರಿಸಿದ್ದು ದುಬಾರಿಯ ಆಯಿತೆಂದು ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮನೆಯ ಒಳಗಿಂದ ಬಂದ ಮಹಿಳೆಯ ಮಗ ಸೊಪ್ಪು ವ್ಯಾಪಾರಿ ಭರತ್ ಕುಮಾರ್’ಗೆ ಥಳಿಸಿದ್ದಾನೆ. ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ಭರತ್ ದೂರಿನಲ್ಲಿ ತಿಳಿಸಿದ್ದಾರೆ.
ಸ್ಥಳೀಯರು ಜಗಳ ಬಿಡಿಸಿದ್ದು, ಗಾಯಗೊಂಡಿದ್ದ ಭರತ್ ಕುಮಾರ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಕಿತ್ಸೆ ಪಡೆದುಕೊಂಡಿದ್ದಾರೆ. ಬಳಿಕ ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200