ಮಾಮೂಲಿ ಕೊಡುವಂತೆ ಮತ್ತೊಬ್ಬ ವ್ಯಾಪಾರಿಗೆ ಬೆದರಿಕೆ, ಕೆನ್ನೆಗೆ ಚಾಕು ಇರಿತ, ಮೊಬೈಲ್ ಕಸಿದು ಪರಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021

ಮಾಮೂಲಿ ಕೊಡಬೇಕು ಎಂದು ವ್ಯಾಪಾರಿಗೆ ಬೆದರಿಸಿ ಚಾಕುವಿನಿಂದ ಗಾಯಗೊಳಿಸಿದ ಮತ್ತೊಂದು ಪ್ರಕರಣ ವರದಿಯಾಗಿದೆ. ಪ್ರತಿ ತಿಂಗಳು ಮಾಮೂಲಿ ಕೊಡಬೇಕು ಎಂದು ಬೆದರಿಸಿ, ದುಷ್ಕರ್ಮಿಗಳು ವ್ಯಾಪಾರಿಯೊಬ್ಬರಿಗೆ ಬೆದರಿಸಿದ್ದಾರೆ. ಅವರ ಕೆನ್ನೆಗೆ ಚಾಕು ಇರಿದು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ | ‘ಪ್ರತಿ ದಿನ ಮಾಮೂಲಿ ಕೊಡದಿದ್ದರೆ ನಿನ್ನ ಹೆಂಡತಿ ಮಕ್ಕಳ ಸಹಿತ ಅಂಗಡಿಗೆ ಬೆಂಕಿ ಹಚ್ಚುತ್ತೇವೆ’

ಶಿವಮೊಗ್ಗ ನಗರದ ಬುದ್ಧಾ ನಗರದ ಗ್ಯಾಸ್ ಸ್ಟೌ ರಿಪೇರಿ ಮಳಿಗೆ ಇಟ್ಟುಕೊಂಡಿರುವ ಅಯೂಬ್ ಖಾನ್ ಅವರ ಮೇಲೆ ದಾಳಿ ಮಾಡಲಾಗಿದೆ. ರಾತ್ರಿ ಅಯೂಬ್ ಖಾನ್ ಅವರ ಅಂಗಡಿ ಬಳಿ ಬಂದ ಜಕ್ರು ಎಂಬಾತ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ನಿಮ್ಮ ಮಗ ಮಾಮೂಲಿ ಕೊಡಬೇಕು

ಅಂಗಡಿ ಬಳಿಗೆ ಬಂದ ಜಕ್ರು, ಅಯೂಬ್ ಖಾನ್ ಅವರ ಮಗನ ಎಲ್ಲಿದ್ದಾನೆ ಎಂದು ವಿಚಾರಿಸಿದ್ದಾನೆ. ಯಾಕೆ ಎಂದು ಅಯೂಬ್ ಖಾನ್ ಕೇಳಿದಾಗ ನಿಮ್ಮ ಮಗ ಪ್ರತಿ ತಿಂಗಳು 10 ಸಾವಿರ ರೂ. ಮಾಮೂಲಿ ಕೊಡಬೇಕು ಎಂದು ಜಕ್ರು ತಿಳಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮಾಮೂಲಿ ಕೊಡುವುದಿಲ್ಲ ಅಂದಿದ್ದಕ್ಕೆ ಅಯೂಬ್ ಖಾನ್ ಅವರಿಗೆ ಬೆದರಿಕೆ ಒಡ್ಡಲಾಗಿದೆ. ಈ ವೇಳೆ ಅಯೂಬ್ ಖಾನ್ ಅವರು ತಮ್ಮ ಮಗನಿಗೆ ಕರೆ ಮಾಡಲು ಫೋನ್ ಕೈಗೆತ್ತಿಕೊಂಡಿದ್ದಾರೆ. ಆಗ ಜಕ್ರು ತನ್ನ ಬಳಿ ಇದ್ದ ಚಾಕುವಿನಿಂದ ಅಯೂಬ್ ಖಾನ್ ಅವರ ಕೆನ್ನೆಗೆ ಇರಿದು, ಮೊಬೈಲ್ ಕಸಿದುಕೊಂಡು ಬೈಕ್’ನಲ್ಲಿ ಪರಾರಿಯಾಗಿದ್ದಾನೆ.

ಈ ಹಿನ್ನೆಲೆ ಜಕ್ರು ಮತ್ತು ಬೈಕ್’ನಲ್ಲಿ ಬಂದಾತನ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಂದೇ ಒಂದು ಫೋನ್ ಕರೆ ಮಾಡಿದರೆ ನುರಿತ ತಜ್ಞರಿಂದ ನಡೆಯುತ್ತೆ ತಪಾಸಣೆ. ಈಗಲೆ ಕರೆ ಮಾಡಿ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 21, 2021

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment