ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೈಕಿನ ಫುಟ್ ರೆಸ್ಟ್ ಮೇಲೆ ಕಾಲಿಟ್ಟ ವಿಚಾರಕ್ಕೆ ಯುವಕರ ಮಧ್ಯೆ ಗಲಾಟೆಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯ ಹರಕೆರೆಯಲ್ಲಿ ಘಟನೆ ಸಂಭವಿಸಿದೆ. ಶಿವಾಲಯ ಸಮೀಪ ಟೀ ಅಂಗಡಿಯೊಂದರ ಬಳಿ ಗಲಾಟೆಯಾಗಿದೆ.
ಕಾಲಿಟ್ಟಿದ್ದಕ್ಕೆ ಶುರುವಯ್ತು ಜಗಳ
ಇತ್ತೀಚೆಗೆ ಸುನಿಲ್ ಎಂಬುವವರು ಸ್ನೇಹಿತನೊಂದಿಗೆ ವಾಕಿಂಗ್’ಗೆ ತೆರಳಿದ್ದರು. ಮಳೆ ಬಂದಿದ್ದರಿಂದ ಟೀ ಅಂಗಡಿಯೊಂದರ ಮುಂದೆ ನಿಂತಿದ್ದರು. ಆ ಹೊತ್ತಿಗೆ ಸುನಿಲ್’ನ ಸಹೋದರ ಪ್ರಕಾಶ್ ಬೈಕಿನಲ್ಲಿ ಅಲ್ಲಿಗೆ ಬಂದಿದ್ದಾರೆ.

ಅಲ್ಲಿಯೇ ಇದ್ದ ಆದರ್ಶ್ ಮತ್ತು ಆಕಾಶ್ ಎಂಬುವವರು ಪ್ರಕಾಶ್ ಅವರ ಬೈಕಿನ ಫುಟ್ ರೆಸ್ಟ್ ಮೇಲೆ ಕಾಲಿಟ್ಟಿದ್ದಾರೆ. ಕಾಲು ತೆಗೆಯುವಂತೆ ಪ್ರಕಾಶ್ ಹೇಳಿದ್ದಾರೆ. ಈ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಆದರ್ಶ ಮತ್ತು ಆಕಾಶ್ ಅವರು ತಮ್ಮ ಸ್ನೇಹಿತರನ್ನು ಕರೆಯಿಸಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಸುನಿಲ್ ಮತ್ತು ಪ್ರಕಾಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






