ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2021
ಬೈಕಿನ ಫುಟ್ ರೆಸ್ಟ್ ಮೇಲೆ ಕಾಲಿಟ್ಟ ವಿಚಾರಕ್ಕೆ ಯುವಕರ ಮಧ್ಯೆ ಗಲಾಟೆಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯ ಹರಕೆರೆಯಲ್ಲಿ ಘಟನೆ ಸಂಭವಿಸಿದೆ. ಶಿವಾಲಯ ಸಮೀಪ ಟೀ ಅಂಗಡಿಯೊಂದರ ಬಳಿ ಗಲಾಟೆಯಾಗಿದೆ.
ಕಾಲಿಟ್ಟಿದ್ದಕ್ಕೆ ಶುರುವಯ್ತು ಜಗಳ
ಇತ್ತೀಚೆಗೆ ಸುನಿಲ್ ಎಂಬುವವರು ಸ್ನೇಹಿತನೊಂದಿಗೆ ವಾಕಿಂಗ್’ಗೆ ತೆರಳಿದ್ದರು. ಮಳೆ ಬಂದಿದ್ದರಿಂದ ಟೀ ಅಂಗಡಿಯೊಂದರ ಮುಂದೆ ನಿಂತಿದ್ದರು. ಆ ಹೊತ್ತಿಗೆ ಸುನಿಲ್’ನ ಸಹೋದರ ಪ್ರಕಾಶ್ ಬೈಕಿನಲ್ಲಿ ಅಲ್ಲಿಗೆ ಬಂದಿದ್ದಾರೆ.
ಅಲ್ಲಿಯೇ ಇದ್ದ ಆದರ್ಶ್ ಮತ್ತು ಆಕಾಶ್ ಎಂಬುವವರು ಪ್ರಕಾಶ್ ಅವರ ಬೈಕಿನ ಫುಟ್ ರೆಸ್ಟ್ ಮೇಲೆ ಕಾಲಿಟ್ಟಿದ್ದಾರೆ. ಕಾಲು ತೆಗೆಯುವಂತೆ ಪ್ರಕಾಶ್ ಹೇಳಿದ್ದಾರೆ. ಈ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಆದರ್ಶ ಮತ್ತು ಆಕಾಶ್ ಅವರು ತಮ್ಮ ಸ್ನೇಹಿತರನ್ನು ಕರೆಯಿಸಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಸುನಿಲ್ ಮತ್ತು ಪ್ರಕಾಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200