ಬ್ಯಾಂಕ್ ಅಧಿಕಾರಿ ಹೆಸರಲ್ಲಿ ಕರೆ ಮಾಡಿ ಶಿವಮೊಗ್ಗದ ವ್ಯಕ್ತಿಗೆ 50 ಸಾವಿರ ರೂ. ಪಂಗನಾಮ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಟಿಎಂ ಕಾರ್ಡ್ ಅವಧಿ ಮುಗಿದಿದೆ ಎಂದು ಕರೆ ಮಾಡಿದ ವಂಚಕನೊಬ್ಬ, ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 50 ಸಾವಿರ ರೂ. ಪಂಗನಾಮ ಹಾಕಿದ್ದಾನೆ.

ಬ್ಯಾಂಕ್ ಅಧಿಕಾರಿ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ, ಹಸೂಡಿ ಗ್ರಾಮದ ಎ.ಎನ್.ಬೆಳ್ಳಯ್ಯ ಎಂಬುವವರನ್ನು ವಂಚಿಸಿದ್ದಾನೆ.

ಎಟಿಎಂ ಕಾರ್ಡ್ ಅವಧಿ ಮುಗಿದಿದೆ. ಅದನ್ನು ಕೂಡಲೇ ನವೀಕರಣ ಮಾಡಿಸಿಕೊಳ್ಳಿ. ಇದಕ್ಕಾಗಿ ಮೊಬೈಲ್’ಗೆ ಬರುವ ಒಟಿಪಿ ಪಿನ್ ನಂಬರ್ ಹೇಳುವಂತೆ ತಿಳಿಸಿದ್ದಾನೆ. ವಂಚಕನ ಮಾತು ನಂಬಿದ ಬೆಳ್ಳಯ್ಯ ಒಟಿಪಿ ನಂಬರ್ ನೀಡಿದ್ದಾರೆ. ಕೆಲವೇ ಕ್ಷಣದಲ್ಲಿ ಬೆಳ್ಳಯ್ಯ ಅವರ ಬ್ಯಾಂಕ್ ಖಾತೆಯಿಂದ 50,327 ರೂ. ಹಣ ಮಾಯವಾಗಿದೆ.

ಆನ್’ಲೈನ್ ಮೂಲಕ ಬೆಳ್ಳಯ್ಯ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿದ್ದು, ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment