ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019
ಎಟಿಎಂ ಕಾರ್ಡ್ ಅವಧಿ ಮುಗಿದಿದೆ ಎಂದು ಕರೆ ಮಾಡಿದ ವಂಚಕನೊಬ್ಬ, ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 50 ಸಾವಿರ ರೂ. ಪಂಗನಾಮ ಹಾಕಿದ್ದಾನೆ.
ಬ್ಯಾಂಕ್ ಅಧಿಕಾರಿ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ, ಹಸೂಡಿ ಗ್ರಾಮದ ಎ.ಎನ್.ಬೆಳ್ಳಯ್ಯ ಎಂಬುವವರನ್ನು ವಂಚಿಸಿದ್ದಾನೆ.
ಎಟಿಎಂ ಕಾರ್ಡ್ ಅವಧಿ ಮುಗಿದಿದೆ. ಅದನ್ನು ಕೂಡಲೇ ನವೀಕರಣ ಮಾಡಿಸಿಕೊಳ್ಳಿ. ಇದಕ್ಕಾಗಿ ಮೊಬೈಲ್’ಗೆ ಬರುವ ಒಟಿಪಿ ಪಿನ್ ನಂಬರ್ ಹೇಳುವಂತೆ ತಿಳಿಸಿದ್ದಾನೆ. ವಂಚಕನ ಮಾತು ನಂಬಿದ ಬೆಳ್ಳಯ್ಯ ಒಟಿಪಿ ನಂಬರ್ ನೀಡಿದ್ದಾರೆ. ಕೆಲವೇ ಕ್ಷಣದಲ್ಲಿ ಬೆಳ್ಳಯ್ಯ ಅವರ ಬ್ಯಾಂಕ್ ಖಾತೆಯಿಂದ 50,327 ರೂ. ಹಣ ಮಾಯವಾಗಿದೆ.
ಆನ್’ಲೈನ್ ಮೂಲಕ ಬೆಳ್ಳಯ್ಯ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿದ್ದು, ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















