| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಜುಲೈ 2021
ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಮತ್ತು ಡೆಪಾಸಿಟ್ ಮೆಷಿನ್ ಒಡೆದು ಹಣ ದೋಚಲು ವಿಫಲ ಯತ್ನವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ.
ಬಿ.ಹೆಚ್.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ನ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಜುಲೈ 5ರ ರಾತ್ರಿ ಕಳ್ಳತನದ ಯತ್ನವಾಗಿದೆ. ಸ್ಕ್ರೂ ಡ್ರೈವರ್, ಸ್ಪಾನರ್ ಬಳಸಿ ಡೆಪಾಸಿಟಿವ್ ಮೆಷಿನ್ ಮತ್ತು ಎಟಿಎಂ ಮೆಷಿನ್ ಬಿಚ್ಚಲು ಯತ್ನಿಸಿದ್ದಾರೆ. ಹಣ ಕಳ್ಳತನ ಮಾಡಲು ಸಾಧ್ಯವಾಗಿರಲಿಲ್ಲ.
ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ಅರಳಿಹಳ್ಳಿ ಬಸಲಿಕಟ್ಟೆಯ ಟ್ರಾಕ್ಟರ್ ಚಾಲಕ ಅಸಾದುಲ್ಲಾ ಅಲಿಯಾಸ್ ಹರ್ಷದ್ (32) ಎಂಬಾತನನ್ನು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ತಮ್ಮಯ್ಯದಾಸ ಅವರ ದೂರಿನ ಅನ್ವಯ ಓಲ್ಡ್ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರೆಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()