Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ನಾಳೆ ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ನಾಳೆ ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

09/01/2023 6:32 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 9 JANUARY 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ : ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್ ನಿಂದ ಹಲ್ಲೆಗೆ (Attack) ಯತ್ನಿಸಿದ್ದಾನೆ. ಕೂದಲೆಳೆ ಅಂತರದಿಂದ ಸುನಿಲ್ ಬಚಾವಾಗಿದ್ದಾರೆ. ಘಟನೆ ಹಿನ್ನೆಲೆ ಸಾಗರ ಪಟ್ಟಣದಲ್ಲಿ ಅರ್ಧ ದಿನ ಬಂದ್ ಗೆ ಕರೆ ನೀಡಲಾಗಿದೆ.

ಸ್ವಲ್ಪದರಲ್ಲೆ ಪಾರಾದ ಸುನಿಲ್

ಬಜರಂಗದಳ ನಗರ ಸಹ ಸಂಚಾಲಕ ಸುನಿಲ್ ಇವತ್ತು ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ನಗರದ ಬಿ.ಹೆಚ್.ರಸ್ತೆ ಆಭರಣ ಶೋ ರೂಂ ಬಳಿ ಬರುತ್ತಿದ್ದಂತೆ ಘಟನೆ ಸಂಭವಿಸಿದೆ. ಈ ಮೊದಲೆ ಶೋ ರೂಂ ಬಳಿ ಬಂದು ನಿಂತಿದ್ದ ಯುವಕನೊಬ್ಬ ತನ್ನ ದ್ವಿಚಕ್ರ ವಾಹನದಲ್ಲಿ ಇಟ್ಟಿದ್ದ ಮಾರಕಾಸ್ತ್ರ ತೆಗೆದು ಸುನಿಲ್ ನತ್ತ ಬೀಸುತ್ತಾನೆ (Attack). ಸ್ವಲ್ಪದರಲ್ಲಿಯೆ ಸುನಿಲ್ ಪಾರಾಗುತ್ತಾರೆ.

Shimoga SP Mithun Kumar IPS

‘ಸುನಿಲ್ ಬರುವ ಮುಂಚೆಯೆ ಅಲ್ಲಿ ಬಂದು ನಿಂತಿದ್ದ ಸಮೀರ್ ಎಂಬಾತ ಮಾರಕಾಸ್ತ್ರ ಬೀಸಿದ್ದಾನೆ. ಆತನ ಗಾಡಿಯಲ್ಲಿ ಮಚ್ಚು ಇತ್ತೊ, ಲಾಂಗ್ ಇತ್ತೊ ಅನ್ನುವುದರ ಕುರಿತು ಪರಿಶೀಲನೆ ನಡೆಯುತ್ತಿದೆ. ಘಟನೆಯಲ್ಲಿ ಯಾವುದೆ ಗಾಯವಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗುತ್ತಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರ ಬೀಸಲು ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಟ್ಟಡವೊಂದರ ಮುಂದೆ ನಿಲ್ಲಿಸಿದ್ದ ತನ್ನ ಬೈಕನ್ನು ಸಮೀರ್ ಎಂಬಾತ ಹಿಂದಕ್ಕೆ ತೆಗೆದುಕೊಳ್ಳುತ್ತಿರುತ್ತಾನೆ. ಇದೆ ಹೊತ್ತಿಗೆ ಸುನಿಲ್ ಆ ರಸ್ತೆಯಲ್ಲಿ ಬರುತ್ತಾರೆ. ಕೂಡಲೆ ಬೈಕನ್ನ ಯು ಟರ್ನ್ ಪಡೆದು ಕಟ್ಟಡದ ಕಡೆಗೆ ಬರುತ್ತಾರೆ. ಸುನಿಲ್ ಬರುವುದನ್ನು ಗಮನಿಸಿದ ಸಮೀರ್, ತನ್ನ ಬೈಕಿನ ಡಿಕ್ಕಿಯಲ್ಲಿದ್ದ ಮಾರಕಾಸ್ತ್ರವನ್ನು ಹೊರಗೆ ತೆಗೆಯುತ್ತಾನೆ.

ಅಪಾಯದ ಮುನ್ಸೂಚನೆ ಸಿಗುತ್ತಲೆ ಸುನಿಲ್ ಬೈಕನ್ನು ವೇಗವಾಗಿ ಚಲಾಯಿಸುತ್ತಾರೆ. ಅಷ್ಟು ಹೊತ್ತಿಗಾಲೆ ಸಮೀರ್ ಮಾರಕಾಸ್ತ್ರ ಬೀಸುತ್ತಾನೆ. ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗುತ್ತಾರೆ. ಈ ವೇಳೆಗೆ ರಸ್ತೆಯಲ್ಲಿ ಹೋಗುತ್ತಿದ್ದ ಶಾಲಾ ಮಕ್ಕಳು ಘಟನೆ ಕಂಡು ಆತಂಕಕ್ಕೀಡಾಗುತ್ತಾರೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Shimoga Live News Update 3 Million Views

‘ಹಿಂದಿನ ದಿನ ಫಾಲೋ ಮಾಡಿ ಬೆದರಿಕೆ’

ಭಾನುವಾರ ಶಿವಮೊಗ್ಗ ನಗರದಲ್ಲಿ ಬಜರಂಗದಳದ ವತಿಯಿಂದ ಶೌರ್ಯ ಯಾತ್ರೆ ಆಯೋಜಿಸಲಾಗಿತ್ತು. ಈ

sunil sagara
ಸುನಿಲ್

ಕಾರ್ಯಕ್ರಮಕ್ಕೆ ಸುನಿಲ್ ಬೈಕಿನಲ್ಲಿ ತೆರಳುತ್ತಿದ್ದರು. ಆಗ ಬಿ.ಹೆಚ್.ರಸ್ತೆಯಲ್ಲಿ ಸುನಿಲ್ ಬೈಕಿಗೆ ತಾಗುವಂತೆ ಬೈಕನ್ನು ಹತ್ತಿರಕ್ಕೆ ತಂದ ಯುವಕರ ಗುಂಪು, ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದೆ ಎಂದು ಸುನಿಲ್ ದೂರಿನಲ್ಲಿ ಆರೋಪಿಸಿದ್ದಾರೆ.

ಹಿಂದೂ ಕಾರ್ಯಕರ್ತರು ಗರಂ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಇಂದು ಸಾಗರ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಪ್ರತಿಭಟನೆ ನಡೆಸಿದರು. ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು. ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದರು.

Protest by Hindu Workers in Sagara

ಸುನಿಲ್ ಮನೆಗೆ ಎಂಎಲ್ಎ ಭೇಟಿ

ಇನ್ನು, ಮಾಹಿತಿ ತಿಳಿಯುತ್ತಿದ್ದಂತೆ ಬಜರಂಗದಳ ಸಹ ಸಂಚಾಲಕ ಸುನಿಲ್ ಮನೆಗೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿದರು. ಸುನಿಲ್ ಮತ್ತು ಆತನ ಕುಟುಂಬದವರಿಗೆ ಧೈರ್ಯ ಹೇಳಿದರು. ಅಲ್ಲದೆ ಸಾಗರ ಎಎಸ್ಪಿ, ಪಟ್ಟಣದ ಪೊಲೀಸರ ಜೊತೆಗೆ ಸಭೆ ನಡೆಸಿ, ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ – ಕೊನೆವರೆಗು ಹೋರಾಡಿದ ಉದ್ಯಮಿ ಶರತ್ ಭೂಪಾಳಂ, ಭಾನುವಾರ ಬೆಳಗಿನ ಜಾವ ಏನೇನಾಯ್ತು?

ಸಾಗರ ಬಂದ್ ಗೆ ಕರೆ

ಸುನಿಲ್ ಮೇಲೆ ಹಲ್ಲೆ ಯತ್ನ ಖಂಡಿಸಿ ಸಾಗರ ನಗರದಲ್ಲಿ ಬಂದ್ ಮಾಡಲು ಹಿಂದೂ ಸಂಘಟನೆಗಳ ಮುಖಂಡರು ಕರೆ ನೀಡಿದ್ದಾರೆ. ಜ.10ರಂದು ಸಾಗರ ಪಟ್ಟಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ.

ಮೂರು ತಂಡ ರಚನೆ

ಮಾರಕಾಸ್ತ್ರ ಬೀಸಿದ ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ಸಮೀರ್ ಮತ್ತು ಇತರೆ ದುಷ್ಕರ್ಮಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ. ‘ಆರೋಪಿಗಳ ಬಂಧನಕ್ಕೆ ಮೂರು ತಂಡ ರಚಿಸಲಾಗಿದೆ. ತನಿಖೆಯ ಬಳಿಕ ಘಟನೆಗೆ ಕಾರಣ ತಿಳಿಯಲಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article APMC-Shimoga-General-Image-1.jpg ಶಿವಮೊಗ್ಗದಲ್ಲಿ 208 ಕ್ವಿಂಟಾಲ್ ಪಡಿತರ ಅಕ್ಕಿ ಹರಾಜಿಗೆ ದಿನಾಂಕ ನಿಗದಿ
Next Article Areca Price in Shimoga APMC ಅಡಕೆ ಧಾರಣೆ | 9 ಜನವರಿ 2023 | ಚೇತರಿಕೆಯತ್ತ ರಾಶಿ ಅಡಕೆ ರೇಟ್

ಇದನ್ನೂ ಓದಿ

Tiranaga-Yathre-at-sagara-BY-Raghavendra-and-Halappa - Indian Flag
SAGARA

ಸಾಗರದಲ್ಲಿ ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ ಹೊತ್ತು ಸಾಗಿದ ಜನ, ಹೇಗಿತ್ತು ಮೆರವಣಿಗೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Electric-Locomotive-train-for-Shimoga
CRIME DIARYSHIVAMOGGA CITY

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Former-Minister-Haratalu-Halappa-BJP
SAGARA

ಸಾಗರದಲ್ಲಿ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಾರ್ವಜನಿಕ ಸಭೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
160125 mc gann hospital general image
CRIME DIARYSHIVAMOGGA CITY

ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?