SHIVAMOGGA LIVE NEWS | 30 APRIL 2024
BHADRAVATHI : ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭದ ವೇಳೆ ಗುರಾಯಿಸಿದ ಎಂಬ ಕಾರಣಕ್ಕೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭ ಮುಗಿಸಿ ಮನೆಗೆ ತೆರಳುವಾಗ ದಾಳಿ ನಡೆಸಲಾಗಿದೆ. ಸಮಾರಂಭದಲ್ಲಿ ಯತಿನ್ ಬೋಸ್ಲೆ ಮತ್ತು ಸುಹಾಸ್ ಎಂಬುವವರು ಗುರಾಯಿಸಿದ್ದಾರೆ ಎಂದು ಆರೋಪಿಸಿ ನಾಲ್ವರ ಗುಂಪು, ರಸ್ತೆಯಲ್ಲಿ ಇಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಬಿಯರ್ ಬಾಟಲಿಯಿಂದ ಯತಿನ್ ಬೋಸ್ಲೆಯ ಬೆನ್ನಿಗೆ ಚುಚ್ಚಿ ಗಾಯಗೊಳಿಸಲಾಗಿದೆ. ಘಟನೆ ಸಂಬಂಧ ಮಂಜು ಸೇರಿ ನಾಲ್ವರ ವಿರುದ್ಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಕಸ ಬಿಸಾಡಲು ಮನೆಯಿಂದ ಹೊರ ಬಂದ ಮಹಿಳೆ ಸಾವು, ಹೆದ್ದಾರಿ ಮೇಲಿತ್ತು ಮೃತದೇಹ, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200