SHIVAMOGGA LIVE NEWS | ANANDAPURA | 19 ಏಪ್ರಿಲ್ 2022
ಬಾರ್ ಒಂದರಲ್ಲಿ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿ ವ್ಯಕ್ತಿಯೊಬ್ಬನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೇರಳದ ಜಿಸ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಸಾಗರ ತಾಲೂಕು ಆನಂದಪುರದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ.
ರಬ್ಬರ್ ಟಾಪಿಂಗ್ ಕೆಲಸ ಮಾಡುತ್ತಿದ್ದ ಜಿಸ್ ಎಂಬಾತ ಆನಂದಪುರದ ಬಾರ್ ಒಂದಕ್ಕೆ ಹೋಗಿದ್ದಾನೆ. ಜಿಸ್’ಗೆ ಕನ್ನಡ ಭಾಷೆ ಬರುವುದಿಲ್ಲ. ಬಾರ್’ನಲ್ಲಿ ಯಾರೊಂದಿಗೋ ಗಲಾಟೆಯಾಗಿದೆ. ಈ ವೇಳೆ ಜಿಸ್ ತಲೆಯ ಹಿಂಭಾಗಕ್ಕೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ.
ಕೂಡಲೆ ಅವರನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200