ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 3 JULY 2023
SHIMOGA : ನಗರದ ಹಸರೀಕರಣದ ಕುರಿತು ಶಿವಮೊಗ್ಗ ಶಾಸಕರ ಕಚೇರಿಯಲ್ಲಿ (MLA Office) ಕರೆದಿದ್ದ ಸಭೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಸಭೆಗೆ ಬಂದಿದ್ದ ಮತ್ತೊಬ್ಬ ವ್ಯಕ್ತಿ ಹಲ್ಲೆ ನಡೆಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆ ದಾಳಿ ಮಾಡಲಾಗಿದೆ ಎಂದ ಆರೋಪಿಸಿ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಕಚೇರಿಯಲ್ಲೇ ಹಲ್ಲೆ
ಶಿವಮೊಗ್ಗ ನಗರದ ಹಸರೀಕರಣದ ಕುರಿತು ಜೂ.21ರಂದು ಶಿವಮೊಗ್ಗ ಶಾಸಕರ ಕಚೇರಿಯಲ್ಲಿ (MLA Office) ಸಭೆ ಕರೆಯಲಾಗಿತ್ತು. ವೆಂಕಟೇಶ್ ಎಂಬುವವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಹುತೇಕ ಮುಕ್ತಾಯ ಹಂತದಲ್ಲಿದ್ದಾಗ ವ್ಯಕ್ತಿಯೊಬ್ಬರು ಹಾಜರಾಗಿದ್ದರು. ಹಸರೀಕರಣದ ಕುರಿತು ಚರ್ಚೆ ವೇಳೆ ಆ ವ್ಯಕ್ತಿ ಏಕಾಏಕಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವೆಂಕಟೇಶ್ ದೂರಿನಲ್ಲಿ ಆರೋಪಿಸಿದ್ದಾರೆ.
ಹಳೆ ದ್ವೇಷದಿಂದ ದಾಳಿ
ವೆಂಕಟೇಶ್ ಅವರಿಗೆ ಆ ವ್ಯಕ್ತಿ ಹಣ ಕೊಡುವುದು ಬಾಕಿ ಇತ್ತು. ಇದೆ ದ್ವೇಷದ ಹಿನ್ನೆಲೆ, ಸಭೆಯಲ್ಲಿ ಅವಾಚ್ಯವಾಗಿ ಬೈದು, ಎಳೆದಾಡಿ ತಲೆಗೆ ಹೊಡೆದಿದ್ದಾರೆ. ಈ ಹಿಂದೆ ಅಪಘಾತವಾಗಿ ತಲೆಗೆ ಗಂಭೀರ ಗಾಯವಾಗಿತ್ತು. ಇದು ಆ ವ್ಯಕ್ತಿಗೆ ಗೊತ್ತಿತ್ತು. ಹಾಗಾಗಿ ತಲೆಗೆ ಹೊಡೆದಿದ್ದಾರೆ ಎಂದು ವೆಂಕಟೇಶ್ ಆರೋಪಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಪಾನಿಪೂರಿ ಸ್ಟಾಲ್ಗೆ ಸಿನಿಮಾ ನಟ | ಭದ್ರಾವತಿಯಲ್ಲಿ ಶಾಸಕಿಯ ಕಚೇರಿ | ಮತ್ತಷ್ಟು ಸುದ್ದಿಗಳು
ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯದಲ್ಲಿ ದೂರು ನೀಡಿದ್ದರು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ಬಾಲಕೃಷ್ಣ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ, ಟೈಮಿಂಗ್ ಏನು? ಏರೋ ಶೋಗೆ ಸಂಸದರು ಮನವಿ ಮಾಡಿದ್ದೇಕೆ?
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






