SHIVAMOGGA LIVE NEWS | 25 DECEMBER 2023
SHIMOGA : ದನ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಆರು ಮಂದಿ ದಾಳಿ ನಡೆಸಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಆತನ ಮೇಲೆ ಹಲ್ಲೆ ನಡೆಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಡಿ.22ರಂದು ಸಂಜೆ ನದೀಮ್ ಅಹಮದ್ ಎಂಬುವವರು ಸೋಮಿನಕೊಪ್ಪದ ಜಮೀನು ಒಂದರಲ್ಲಿ ದನ ಮೇಯಿಸುತ್ತಿದ್ದರು. ಈ ಸಂದರ್ಭ ಸ್ಪ್ಲೆಂಡರ್ ಬೈಕ್ ಮತ್ತು ಟಿವಿಎಸ್ ಎಕ್ಸ್ಎಲ್ನಲ್ಲಿ ಆರು ಮಂದಿ ಆಗಮಿಸಿದ್ದು, ನದೀಮ್ ಅಹಮದ್ ಬಳಿ ಬಂದಿದ್ದಾರೆ. ಅವರ ಕೈಯಲ್ಲಿದ್ದ 16 ಸಾವಿರ ರೂ. ಮೌಲ್ಯದ ವೀವೋ ಕಂಪನಿಯ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ನದೀಮ್ ಅಹಮದ್ ಮೊಬೈಲ್ ಬಿಗಿಯಾಗಿ ಹಿಡಿದಿದ್ದರಿಂದ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸಿನಲ್ಲಿ ಮೊಬೈಲ್ ಬಳಸಿದ ಚಾಲಕ, ಫೋಟೊ ತೆಗೆದ ಪ್ರಯಾಣಿಕ, ಮುಂದೇನಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200