SHIVAMOGGA LIVE NEWS | 8 ಮಾರ್ಚ್ 2022
ಕಂಡಕ್ಟರ್ ಒಬ್ಬರ ಜೊತೆ ಸಿಟಿ ಬಸ್ಸಿನಲ್ಲಿ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಸ್ಸಿನಲ್ಲಿದ್ದ ಲೀವರ್’ನಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿದ್ದು. ಜಗಳ ಬಿಡಿಸಲು ಬಂದ ಡ್ರೈವರ್ ಮೇಲೂ ಹಲ್ಲೆಯಾಗಿದೆ.
ಕಂಡಕ್ಟರ್ ಈರಣ್ಣ, ಡ್ರೈವರ್ ಖಲೀಲ್ ಗಾಯಗೊಂಡಿದ್ದಾರೆ. ವಿನೋಬನಗರದ 100 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ವಿನೋಬನಗರ 100 ಅಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಸಿಟಿ ಬಸ್ ಅಡ್ಡಗಟ್ಟಿ ನಾಲ್ವರು ಬಸ್ ಹತ್ತಿದ್ದಾರೆ. ಏಕಾಏಕಿ ಕಂಡಕ್ಟರ್ ಈರಣ್ಣ ಜೊತೆಗೆ ಜಗಳ ಆರಂಭಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಲೀವರ್’ನಿಂದ ಹಲ್ಲೆ ನಡೆಸಿದ್ದಾರೆ. ಕೂಡಲೆ ಬಸ್ ನಿಲ್ಲಿಸಿದ ಚಾಲಕ ಖಲೀಲ್ ಅವರು ಜಗಳ ಬಿಡಿಸಲು ಬಂದಿದ್ದಾರೆ. ಚಾಲಕನ ಮೇಲೂ ಹಲ್ಲೆಯಾಗಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರೆ ಜಗಳ ಬಿಡಿಸಿ ಕಂಡಕ್ಟರ್, ಡ್ರೈವರ್ ಇಬ್ಬರಿಗು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನೆ ಸಂಬಂಧ ನಾಗರಾಜ, ರಾಕೇಶ, ರಾಮು, ಪ್ರಶಾಂತ ಎಂಬುವವರ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200