SHIMOGA : ಗಂಡ, ಹೆಂಡತಿ ವೈಮನಸು ದೂರ ಮಾಡಲು ಹೋಗಿದ್ದ ಇಬ್ಬರು ಸ್ನೇಹಿತೆಯರಿಗೆ (friends) ಚಾಕುವಿನಿಂದ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಬ್ಬರು ಮಹಿಳೆಯರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಅನುಷಾ (21) ಮತ್ತು ಜಾಹ್ನವಿ ಎಂಬುವವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಅನುಷಾಳ ಸ್ನೇಹಿತೆ ಮತ್ತು ಆಕೆಯ ಗಂಡನ ಮಧ್ಯೆ ಜಗಳವಾಗಿತ್ತು. ಅನುಷಾಳ ಸ್ನೇಹಿತೆ (friends) ಮನೆ ಬಿಟ್ಟು ಹೋಗುವುದಾಗಿ ತಿಳಿಸಿ ಹೋಗಿದ್ದಳು. ಸ್ನೇಹಿತೆಯನ್ನು ಆಕೆಯ ಗಂಡನ ಬಳಿ ಕರೆದೊಯ್ದ ಅನುಷಾ ಸಮಾಧಾನಪಡಿಸಲು ಮುಂದಾಗಿದ್ದಳು. ಈ ವೇಳೆ ಮತ್ತೊಬ್ಬ ಸ್ನೇಹಿತೆ ಜಾಹ್ನವಿಯನ್ನೂ ಕರೆದೊಯ್ದಿದ್ದಳು.
ಈ ವೇಳೆ ಮಾತಿಗೆ ಮಾತು ಬೆಳೆದು ಸ್ನೇಹಿತೆಯ ಗಂಡ ಅನುಷಾಳಿಗೆ ಹೊಡೆದು, ಎಳೆದಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆತನೊಂದಿಗೆ ಬಂದಿದ್ದ ಮತ್ತೊಬ್ಬ ವ್ಯಕ್ತಿ ಚಾಕು ತೆಗೆದು ಅನುಷಾಳ ಕುತ್ತಿಗೆ ಬಳಿ ಮತ್ತು ಜಾಹ್ನವಿಯ ಬೆನ್ನಿಗೆ ಹಲ್ಲೆ ಮಾಡಿದ್ದಾನೆ. ಅಶ್ವಥನಗರದ ಚಾನಲ್ ಏರಿ ಮೇಲೆ ಘಟನೆ ಸಂಭವಿಸಿದೆ. ವಿನೋಬನಗರ ಠಾಣೆಯಲ್ಲಿ ಮಣಿಕಂಠ ಮತ್ತು ಕುಮಾರ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ