SHIVAMOGGA LIVE NEWS | 27 OCTOBER 2023
SHIMOGA : ಕಸ ತೆರವು ಮಾಡದ ವಿಚಾರವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರ ಮೇಲೆ ಮಚ್ಚು, ದೊಣ್ಣೆಯಿಂದ ಹಲ್ಲೆ (Attack) ನಡೆಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ಎಂಬುವವರ ಮೇಲೆ ಹಲ್ಲೆಯಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸ್ವಚ್ಛತೆ ಬಳಿಕ ರಸ್ತೆ ಬದಿ ಕಸ
ಹೊಳೆಬೆನವಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ದಸರಾ ಹಬ್ಬದ ಹಿನ್ನೆಲೆ ಟ್ರಾಕ್ಟರ್ ಸಿಗದೆ ಕಸ ವಿಲೇವಾರಿ ವಿಳಂಬವಾಗಿತ್ತು. ಹಾಗಾಗಿ ರಸ್ತೆ ಬದಿಯಲ್ಲೇ ಕಸ ಬಿಡಲಾಗಿತ್ತು. ಇದೆ ವಿಚಾರವಾಗಿ ಇಬ್ಬರು ಗ್ರಾಮಸ್ಥರು ತಮ್ಮ ಸಂಬಂಧಿ ಪುರಲೆ ನಿವಾಸಿಯೊಬ್ಬನ ಜೊತೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ವಿರುದ್ಧ ಜಗಳವಾಡಿದ್ದಾರೆ.
ದೇಗುಲದ ಬಳಿ ಅಟ್ಯಾಕ್
ಅ.23ರಂದು ಸಂಜೆ ದೇವಸ್ಥಾನದ ಬಳಿ ನಿಂತಿದ್ದಾಗ ಮೂವರು ಆಗಮಿಸಿ ಅವಾಚ್ಯವಾಗಿ ನಿಂದಿಸಿ ಮಚ್ಚಿನಿಂದ ಎಡ ಕಿವಿಗೆ ಹಲ್ಲೆ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆಯಲು ಬಂದಾಗ ತಪ್ಪಿಸಿಕೊಂಡಿದ್ದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಇದೇ ವೇಳೆ ಜಗದೀಶ್ ಅವರ ಸ್ನೇಹಿತರು ಜಗಳ ಬಿಡಿಸಿದ್ದಾರೆ. ಗಾಯಗೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.