SHIVAMOGGA LIVE NEWS, 6 DECEMBER 2024
ಭದ್ರಾವತಿ : ಮದ್ಯ ಸೇವಿಸಿ ವಿದ್ಯುತ್ ದೀಪಗಳ ವಯರ್ ತುಂಡು ಮಾಡಿ, ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಗೆ ಬುದ್ದಿ ಹೇಳಿದ ನಗರಸಭೆ ಮಾಜಿ ಸದಸ್ಯನ (Member) ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ಘಟನೆಯಾಗಿದೆ.
![]() |
ನಗರಸಭೆ ಮಾಜಿ ಸದಸ್ಯ ಅನಿಲ್ ಕುಮಾರ್ ತಲೆಗೆ ಮಚ್ಚಿನೇಟು ಬಿದ್ದಿದೆ. ರಾತ್ರಿ ವ್ಯಕ್ತಿಯೊಬ್ಬ ಮದ್ಯ ಸೇವಿಸಿ ವಿದ್ಯುತ್ ದೀಪಗಳ ವಯರ್ ತುಂಡು ಮಾಡುತ್ತಿದ್ದ. ಆಗ ಅನಿಲ್ ಕುಮಾರ್ ಅವರು ಆತನಿಗೆ ಬುದ್ದಿ ಹೇಳಿ ಕಳುಹಿಸಿದ್ದರು. ಮರುದಿನ ಬೆಳಗ್ಗೆ ಅನಿಲ್ ಕುಮಾರ್ ಮನೆ ಬಳಿ ಬಂದು ಮಚ್ಚು ಬೀಸಿದ್ದಾನೆ. ಅದು ಅನಿಲ್ ಕುಮಾರ್ ತಲೆಗೆ ತಗುಲಿ ಗಾಯಗೊಂಡಿದ್ದಾರೆ. ಕೂಡಲೆ ಅನಿಲ್ ಕುಮಾರ್ ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200