ಶಿವಮೊಗ್ಗದ ಸೆಂಟ್ರಲ್ ಜೈಲ್​​ನಲ್ಲಿ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ, ಕಾರಾಗೃಹದ ಗೇಟ್ ಮುಂದೆ ಹೈಡ್ರಾಮಾ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021

ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಕೈದಿಯೊಬ್ಬನ ಮೇಲೆ ಸಹ ಕೈದಿಗಳೇ ಹಲ್ಲೆ ಮಾಡಿದ್ದಾರೆ. ಈ ನಡುವೆ ಹಲ್ಲೆಗೊಳಗಾದ ಕೈದಿ ಕೊಲೆಯಾಗಿದ್ದಾನೆ ಎಂದು ಸುದ್ದಿ ಹಬ್ಬಿದ್ದರಿಂದ ಜೈಲು ಗೇಟ್‍ ಮುಂದೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಏನಿದು ಕೇಸ್‍? ಹಲ್ಲೆಗೇನು ಕಾರಣ?

ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಸಲ್ಮಾನ್ ಎಂಬಾತನನ್ನು ಬುಧವಾರ ಸಂಜೆ ಜೈಲಿಗೆ ತಂದು ಬಿಡಲಾಗಿತ್ತು. ಇವತ್ತು ಬೆಳಗ್ಗೆ ಸಲ್ಮಾನ್ ಮೇಲೆ ಸಹ ಕೈದಿಗಳಾದ ಸೂಳೆಬೈಲಿನ ಗೌಸ್‍, ಸಲೀಂ ಮತು ಸುಕ್ಕಾ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಜೈಲು ಸಿಬ್ಬಂದಿಯೇ ಗಲಾಟೆ ಬಿಡಿಸಿ, ಸಲ್ಮಾನ್‍ನನ್ನು ರಕ್ಷಿಸಿದ್ದಾರೆ.

ಕೊಲೆ ಅಂತಾ ಹಬ್ಬಿತು ಸುದ್ದಿ

ಸಲ್ಮಾನ್‍ನನ್ನು ಜೈಲಿನಲ್ಲಿ ಕೊಲೆ ಮಾಡಲಾಗಿದೆ ಎಂದು ಹೊರಗೆ ಸುದ್ದಿ ಹಬ್ಬಿದೆ. ಸಲ್ಮಾನ್ ಕಡೆಯವರಿಗೂ ಈ ವಿಚಾರ ತಲುಪಿದ್ದು, ಕೆಲವರು ತುಂಗಾ ನಗರ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಇನ್ನೂ ಕೆಲವರು ಕೇಂದ್ರ ಕಾರಾಗೃಹದ ಬಳಿಗೆ ತೆರಳಿದ್ದರು. ಇದರಿಂದ ಜೈಲು ಗೇಟ್ ಮುಂದೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ತುಂಗಾ ನಗರ ಠಾಣೆ ಪೊಲೀಸರು ಜೈಲು ಗೇಟ್‍ ಮುಂದೆ ನಿಂತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.

ಯಾರಿದು ಸಲ್ಮಾನ್?

ಹಂದಿ ಅಣ್ಣಿ ಸಹೋದರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ಸಲ್ಮಾನ್ ಕೂಡ ಒಬ್ಬ. ಈತನ ವಿರುದ್ಧ ಹಾಫ್ ಮರ್ಡರ್‍ ಕೇಸ್‍ಗಳು ಕೂಡ ಇದ್ದಾವೆ. ಗಾಂಜಾ ಮಾರಾಟ ಸಂಬಂಧವು ದೂರುಗಳಿವೆ. ಇದೆ ಕಾರಣಕ್ಕೆ ಈತ ಬುಧವಾರ ಜೈಲು ಸೇರಬೇಕಾಯ್ತು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸಲ್ಮಾನ್ ಮೇಲೆ ಹಲ್ಲೆಯಾಗಿದೆ ಎಂದು ಹೇಳಲಾಗುತ್ತಿದೆ.

226899497 1164207197392522 6437642103854404479 n.jpg? nc cat=107&ccb=1 3& nc sid=730e14& nc ohc=FSEX6k2V91AAX97lrpV& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 29, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment