ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಕೈದಿಯೊಬ್ಬನ ಮೇಲೆ ಸಹ ಕೈದಿಗಳೇ ಹಲ್ಲೆ ಮಾಡಿದ್ದಾರೆ. ಈ ನಡುವೆ ಹಲ್ಲೆಗೊಳಗಾದ ಕೈದಿ ಕೊಲೆಯಾಗಿದ್ದಾನೆ ಎಂದು ಸುದ್ದಿ ಹಬ್ಬಿದ್ದರಿಂದ ಜೈಲು ಗೇಟ್ ಮುಂದೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಏನಿದು ಕೇಸ್? ಹಲ್ಲೆಗೇನು ಕಾರಣ?
ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಸಲ್ಮಾನ್ ಎಂಬಾತನನ್ನು ಬುಧವಾರ ಸಂಜೆ ಜೈಲಿಗೆ ತಂದು ಬಿಡಲಾಗಿತ್ತು. ಇವತ್ತು ಬೆಳಗ್ಗೆ ಸಲ್ಮಾನ್ ಮೇಲೆ ಸಹ ಕೈದಿಗಳಾದ ಸೂಳೆಬೈಲಿನ ಗೌಸ್, ಸಲೀಂ ಮತು ಸುಕ್ಕಾ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಜೈಲು ಸಿಬ್ಬಂದಿಯೇ ಗಲಾಟೆ ಬಿಡಿಸಿ, ಸಲ್ಮಾನ್ನನ್ನು ರಕ್ಷಿಸಿದ್ದಾರೆ.
ಕೊಲೆ ಅಂತಾ ಹಬ್ಬಿತು ಸುದ್ದಿ
ಸಲ್ಮಾನ್ನನ್ನು ಜೈಲಿನಲ್ಲಿ ಕೊಲೆ ಮಾಡಲಾಗಿದೆ ಎಂದು ಹೊರಗೆ ಸುದ್ದಿ ಹಬ್ಬಿದೆ. ಸಲ್ಮಾನ್ ಕಡೆಯವರಿಗೂ ಈ ವಿಚಾರ ತಲುಪಿದ್ದು, ಕೆಲವರು ತುಂಗಾ ನಗರ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಇನ್ನೂ ಕೆಲವರು ಕೇಂದ್ರ ಕಾರಾಗೃಹದ ಬಳಿಗೆ ತೆರಳಿದ್ದರು. ಇದರಿಂದ ಜೈಲು ಗೇಟ್ ಮುಂದೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ತುಂಗಾ ನಗರ ಠಾಣೆ ಪೊಲೀಸರು ಜೈಲು ಗೇಟ್ ಮುಂದೆ ನಿಂತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
ಯಾರಿದು ಸಲ್ಮಾನ್?
ಹಂದಿ ಅಣ್ಣಿ ಸಹೋದರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ಸಲ್ಮಾನ್ ಕೂಡ ಒಬ್ಬ. ಈತನ ವಿರುದ್ಧ ಹಾಫ್ ಮರ್ಡರ್ ಕೇಸ್ಗಳು ಕೂಡ ಇದ್ದಾವೆ. ಗಾಂಜಾ ಮಾರಾಟ ಸಂಬಂಧವು ದೂರುಗಳಿವೆ. ಇದೆ ಕಾರಣಕ್ಕೆ ಈತ ಬುಧವಾರ ಜೈಲು ಸೇರಬೇಕಾಯ್ತು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸಲ್ಮಾನ್ ಮೇಲೆ ಹಲ್ಲೆಯಾಗಿದೆ ಎಂದು ಹೇಳಲಾಗುತ್ತಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






