ಶಿವಮೊಗ್ಗ : ರಾತ್ರಿ ಊಟ ಮುಗಿಸಿ ಮನೆ ಸಮೀಪ ವಾಕಿಂಗ್ (Walking) ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಹೊಡೆದ ನಾಲ್ವರು ಯುವಕರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದಲ್ಲಿ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಶಿಕ್ಷಕ ವೀರೇಶ್ ಅವರು ರಾತ್ರಿ 10 ಗಂಟೆ ಹೊತ್ತಿಗೆ ಅರವಿಂದ ನಗರದಿಂದ ಸೂರ್ಯ ಲೇಔಟ್ ಕಡೆಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಎದುರಾದ ನಾಲ್ವರು ಅಪರಿಚಿತ ಯುವಕರು ವೀರೇಶ್ ಅವರ ಹಣೆಗೆ ಹೊಡೆದು, ಶರ್ಟ್ ಜೇಬಿನಲ್ಲಿದ್ದ ರೆಡ್ ಮಿ ಮೊಬೈಲ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ