ಶಿವಮೊಗ್ಗ ಲೈವ್
ಶಿವಮೊಗ್ಗ : ರಾತ್ರಿ ಊಟ ಮುಗಿಸಿ ಮನೆ ಸಮೀಪ ವಾಕಿಂಗ್ (Walking) ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಹೊಡೆದ ನಾಲ್ವರು ಯುವಕರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದಲ್ಲಿ ಘಟನೆ ಸಂಭವಿಸಿದೆ.
ಶಿಕ್ಷಕ ವೀರೇಶ್ ಅವರು ರಾತ್ರಿ 10 ಗಂಟೆ ಹೊತ್ತಿಗೆ ಅರವಿಂದ ನಗರದಿಂದ ಸೂರ್ಯ ಲೇಔಟ್ ಕಡೆಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಎದುರಾದ ನಾಲ್ವರು ಅಪರಿಚಿತ ಯುವಕರು ವೀರೇಶ್ ಅವರ ಹಣೆಗೆ ಹೊಡೆದು, ಶರ್ಟ್ ಜೇಬಿನಲ್ಲಿದ್ದ ರೆಡ್ ಮಿ ಮೊಬೈಲ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?


ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ