SHIVAMOGGA LIVE NEWS | 14 APRIL 2023
SHIMOGA : ರಂಜಾನ್ ಹಬ್ಬದ ಪ್ರಯುಕ್ತ ಮಾಲೀಕರ ಮನೆಯಲ್ಲಿ ಊಟಕ್ಕೆ (Dinner) ತೆರಳಿದ್ದ ಕೆಲಸಗಾರನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮಿಳಘಟ್ಟದ ಮೊಹಮದ್ ತಾಂಜಿಮ್ ಎಂಬುವವರು ಆರ್ಎಂಎಲ್ ನಗರದಲ್ಲಿರುವ ತನ್ನ ಮಾಲೀಕರ ಮನೆಗೆ ಊಟಕ್ಕೆ (Dinner) ತೆರಳಿದ್ದರು. ರಸ್ತೆಯಲ್ಲಿ ಅಡ್ಡಗಟ್ಟಿದ್ದ ನಿಹಾಲ್, ವಾದು, ಫೈಜಲ್ ಸೇರಿದಂತೆ ಹಲವರು, ಮೊಹಮದ್ ತಾಂಜಿಮ್ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿಂದ ಮೊಹಮದ್ ತಾಂಜಿಮ್ ಅವರು ಮಾಲೀಕರ ಮನೆಗೆ ತೆರಳಿದ್ದರು. ಆಗ ನಿಹಾಲ್ ಸೇರಿದಂತೆ ಹತ್ತು ಮಂದಿ ಏಕಾಏಕಿ ಮನಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಅಡ್ಡಗಟ್ಟಿ ಕತ್ತು ಹಿಸುಕಲು ಯತ್ನ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200