SHIVAMOGGA LIVE NEWS | 29 ಮಾರ್ಚ್ 2022
ಕ್ರಿಕೆಟ್ ವಿಚಾರವಾಗಿ ಯುವಕರ ಮಧ್ಯೆ ಗಲಾಟೆಯಾಗಿದ್ದು, ಒಬ್ಬನ ಮೇಲೆ ದಾಳಿ ನಡೆಸಲಾಗಿದೆ. ಗಾಯಗೊಂಡಿದ್ದ ಯುವಕ ಚೇತರಿಸಿಕೊಂಡು ಬಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
ಶಿಕಾರಿಪುರದ ಕೋಡಿಹಳ್ಳಿಯ ಹೆಚ್.ಬಿ.ರಜನಿಕಾಂತ (34) ಗಾಯಗೊಂಡಿರುವ ಯುವಕ. ಅರುಣ್ ಕುಮಾರ್ ಮತ್ತು ರಾಕೇಶ ಹಲ್ಲೆ ನಡೆಸಿದವರು.
ಕೋಡಿಹಳ್ಳಿಯ ರವಿ ಎಂಬುವವರನ್ನು ಬೆಂಗಳೂರಿನ ಬಸ್ಸು ಹತ್ತಿಸಲು ಶಿರಾಳಕೊಪ್ಪಕ್ಕೆ ಬಂದಿದ್ದರು. ರಾತ್ರಿ ಬಸ್ಸು ಹತ್ತಿಸಿ ಹಿಂತಿರುಗುವಾಗ ರಜನಿಕಾಂತನನ್ನು ಅರುಣ್ ಮತ್ತು ರಾಕೇಶ್ ಸಮೀಪದ ಡಾಬಾಗೆ ಊಟಕ್ಕೆ ಕರೆದೊಯ್ದಿದ್ದಾರೆ.
ಡಾಬಾ ಸಮೀಪ ಕ್ರಿಕೆಟ್ ವಿಚಾರವಾಗಿ ಮಾತುಕತೆ ನಡೆಸಿ, ಹೊಡೆದಾಡಿಕೊಂಡಿದ್ದಾರೆ. ಬಡಿಗೆಯಿಂದ ರಜನಿಕಾಂತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200