SHIVAMOGGA LIVE NEWS | 28 APRIL 2024
BHADRAVATHI : ರಾತ್ರಿ ಊಟದ ಮುಗಿಸಿ ವಾಕಿಂಗ್ ತೆರಳಿದ್ದವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿ ನಗರದ ಹೊಸಮನೆ ಬಡಾವಣೆಯ ಶಿವಣ್ಣ ಸಾಮಿಲ್ ಬಳಿ ಘಟನೆ ಸಂಭವಿಸಿದೆ. ಕುಲದೀಪ್ ಮತ್ತು ನಂದನ್ ಎಂಬುವವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ.
ಕುಲದೀಪ್ ಮತ್ತು ನಂದನ್ ಊಟ ಮುಗಿಸಿ ರಾತ್ರಿ ವಾಕಿಂಗ್ ತೆರಳಿದ್ದರು. ಈ ವೇಳೆ ಮೂವರು ಯುವಕರು ಇವರನ್ನು ಅಡ್ಡಗಟ್ಟಿ ಮೊಬೈಲ್ ಕೊಡುವಂತೆ ಬೆದರಿಸಿದ್ದಾರೆ. ನಿರಾಕರಿಸಿದಾಗ ಇಬ್ಬರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಅಲ್ಲೆ ಬಿದ್ದಿದ್ದ ಕಲ್ಲಿನಿಂದಲು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಗಲಾಟೆ ಬಿಡಿಸಿ ಗಾಯಾಳುಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸವಳಂಗ – ಆಯನೂರು ಹೆದ್ದಾರಿಯಲ್ಲಿ ಓಮ್ನಿ, ಟಾಟಾ ಏಸ್ ಮುಖಾಮುಖಿ ಡಿಕ್ಕಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200